ಸಾಲ ಬಾಧೆ ; ವಿಷ ಸೇವಿಸಿ ರೈತ ಆತ್ಮಹತ್ಯೆ !

0 37


ರಿಪ್ಪನ್‌ಪೇಟೆ : ಸಮೀಪದ ಮೂಗುಡ್ತಿ ಗ್ರಾಮದ ಕೋಮಲಾಪುರ ನಿವಾಸಿ ಮಂಜುನಾಯ್ಕ (85) ಸಾಲ ಬಾಧೆಯಿಂದ ಕಳೆನಾಶಕ ಸೇವಿಸಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ತಕ್ಷಣ ಅವರನ್ನು ರಿಪ್ಪನ್‌ಪೇಟೆಯ ಸರ್ಕಾರಿ ಅಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.


ಇವರು ತಳಲೆ ವಿ.ಎಸ್.ಎಸ್.ಎನ್.ಬಿ.ಯಲ್ಲಿ 1.15 ಲಕ್ಷ ರೂ. ಬೆಳೆ ಸಾಲ ಮತ್ತು 50 ಸಾವಿರ ರೂ. ವೈಯಕ್ತಿಕ ಸಾಲ ಹಾಗೂ ಕೈಗಡ ಸಾಲ ಸಹ 3.50 ಲಕ್ಷ ರೂ. ಸಾಲ ಮಾಡಿದ್ದು ಬೆಳೆ ಸರಿಯಾಗಿ ಬಾರದೇ ಇರುವುದು ಮತ್ತು ಬೇಸಿಗೆ ಬಿಸಿಲಿನಿಂದಾಗಿ ತೋಟ ಒಣಗುತ್ತಿದ್ದು ಪಡೆದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆ ಹಾಗೂ ತಳಲೆ ಸಹಕಾರ ಬ್ಯಾಂಕ್ ನೋಟಿಸಿನಿಂದಾಗಿ ಬೇಸತ್ತು ವಿಷ ಸೇವಿಸಿದ್ದಾರೆಂದು ಮಗ ಪುಟ್ಟಸ್ವಾಮಿ ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave A Reply

Your email address will not be published.

error: Content is protected !!