ಮತದಾನ ಪ್ರಮಾಣ ಹೆಚ್ಚಿಸುವುದಕ್ಕಾಗಿ ಸ್ವೀಪ್ ಎಕ್ಸ್‌ಪ್ರೆಸ್ ಬಸ್‌ ಜಾಗೃತಿ

ರಿಪ್ಪನ್‌ಪೇಟೆ: ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್‌ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಐಈಸಿ ಸಮಾಲೋಚನಾಧಿಕಾರಿ ಗಣೇಶ್ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮತ್ತು ಶಿವಮೊಗ್ಗ ಸ್ವೀಪ್ ಸಮಿತಿ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದ ಕುರಿತು ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸ್ವೀಪ್ ಎಕ್ಸ್‌ಪ್ರೆಸ್ ಒಳಗೆ ಮಾದರಿ ಮತದಾನ ಜಾಗೃತಿ ಕೇಂದ್ರ ಮತದಾನ ಕೇಂದ್ರಗಳಲ್ಲಿನ ಮೂಲಭೂತ ಸೌಲಭ್ಯಗಳ ಇವಿಎಂ ವಿವಿಪ್ಯಾಟ್ ಪ್ರತಿಕೃತಿಗಳು ಹಾಗೂ ಮತದಾನ ಜಾಗೃತಿ ಬಿತ್ತಿ ಚಿತ್ರಗಳಿವೆ. ಬಸ್ ಹೊರ ಭಾಗದಲ್ಲಿ ಸಿ-ವಿಜಿಲ್ ಆ್ಯಪ್ 1950 ಟೋಲ್ ಫ್ರೀ ಕುರಿತು ಮಾಹಿತಿ ಇದೆ.

ಬಸ್ ನಿಲ್ದಾಣ ಮತ್ತು ಅಟೋ ನಿಲ್ದಾಣದಲ್ಲಿನ ಸಾರ್ವಜನಿಕರು ಸ್ವೀಪ್ ಎಕ್ಸ್‌ಪ್ರೆಸ್‌ನಲ್ಲಿನ ಬಸ್ ಒಳಗಿನ ಮತದಾನ ಕೇಂದ್ರದಲ್ಲಿ ಕುಳಿತು ಪರಿವೀಕ್ಷಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳಾದ ನಾಗೇಶ್ ಮೋರೆ, ರಾಜೇಶ್, ಇನ್ನಿತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Articles

error: Content is protected !!