ರಿಪ್ಪನ್‌ಪೇಟೆಯ ಮೃತ ಯೋಧನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ; ಕುಟುಂಬಕ್ಕೆ ಸಾಂತ್ವನ


ರಿಪ್ಪನ್‌ಪೇಟೆ : ರಿಪ್ಪನ್‌ಪೇಟೆಯ ಯೋಧ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಇಂದು ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ.

ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್ (27) ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ಯೋಧನ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ರಾತ್ರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಮಾದ್ಯಮದೊಂದಿಗೆ ಮಾತನಾಡಿದ ಅವರು, ಒಬ್ಬ ಯುವ ಯೋಧ ಅಕಾಲಿಕವಾಗಿ ಮೃತಪಟ್ಟಿರುವುದು ರಾಷ್ಟ್ರಕ್ಕಾದ ನಷ್ಟವಾಗಿದೆ. ದೇಶ ಸೇವೆಯನ್ನು ಮಾಡುವ ಸದುದ್ದೇಶದಿಂದ ಗ್ರಾಮೀಣ ಪ್ರದೇಶದ ಯುವಕನೊಬ್ಬ ಸೈನ್ಯಕ್ಕೆ ಸೇರಿ ಹಗಲಿರುಳು ದೇಶದ ಜನರ ರಕ್ಷಣೆಗಾಗಿ ಕಾಯಕವನ್ನು ಮಾಡಿ ಇಂದು ಅವರ ಅಕಾಲಿಕ ಮರಣ ನನಗೆ ಅತೀವ ನೋವುಂಟು ಮಾಡಿದೆ. ಮೃತ ಶರೀರವನ್ನು ಊರಿಗೆ ತರಲು ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು. ಈಗಾಗಲೇ ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೀನಿ ಎಂದು ಮಾಧ್ಯಮದವರಿಗೆ ತಿಳಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೆ.ರಾವ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ. ಬಿ. ಮಂಜುನಾಥ್, ಮುಖಂಡರುಗಳಾದ ಆರ್ ಟಿ ಗೋಪಾಲ್, ಸುಧೀಂದ್ರ ಪೂಜಾರಿ, ಎನ್. ಸತೀಶ್. ಪಿ ಸುಧೀರ್ ಇನ್ನಿತರರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,792FollowersFollow
0SubscribersSubscribe
- Advertisement -spot_img

Latest Articles

error: Content is protected !!