ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ; ಸವಾರನಿಗೆ ಗಂಭೀರ ಗಾಯ !

0 45

ರಿಪ್ಪನ್‌ಪೇಟೆ : ಸಮೀಪದ ಗವಟೂರು ಬಳಿ ಗುರುವಾರ ಮಧ್ಯಾಹ್ನ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರನ ತಲೆಗೆ ಗಂಭೀರ ಗಾಯವಾದ ಘಟನೆ ನಡೆದಿದೆ.

ಬೈಕ್ ಸವಾರ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ನಂದಿಗ ಗ್ರಾಮದ ದಾನಪ್ಪ (68) ಗಂಭೀರ ಗಾಯಗೊಂಡ ವ್ಯಕ್ತಿ.

ಬೆಂಗಳೂರು – ಭಟ್ಕಳ ಮಾರ್ಗದ ವಾಯುವ್ಯ ಕರ್ನಾಟಕ ಸಾರಿಗೆ ಬಸ್‌ಗೆ ಗವಟೂರು ಬಳಿ ಎದುರುಗಡೆ ಜಾನುವಾರುಗಳು ಅಡ್ಡ ಬಂದ ಹಿನ್ನಲೆಯಲ್ಲಿ ದಿಢೀರನೆ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರುತ್ತಿದ್ದ ಟಿವಿಎಸ್ ಎಕ್ಎಲ್ ಬೈಕ್‌ ಸವಾರ ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದಿದ್ದು ಇದರಿಂದ ಸವಾರ ದಾನಪ್ಪನಿಗೆ ತಲೆಗೆ ಹಾಗೂ ಭುಜಕ್ಕೆ ತೀವ್ರವಾದ ಪೆಟ್ಟಾಗಿದೆ.

ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!