Categories: Ripponpete

ಅಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದ ತ್ಯಾಜ್ಯ ವಿಲೇವಾರಿ ಘಟಕ ಈಗ ರೋಗಗ್ರಸ್ತ !!

ರಿಪ್ಪನ್‌ಪೇಟೆ: ಸ್ವಚ್ಚ ಗ್ರಾಮ ಯೋಜನೆಯಡಿ ಕೇಂದ್ರ ಸರ್ಕಾರ ಕೊಡಮಾಡುವ ನಿರ್ಮಲ ಗ್ರಾಮ ಪುರಸ್ಕಾರ ಪಡೆದ ಹೊಸನಗರ ತಾಲ್ಲೂಕಿನಲ್ಲಿ ಅತಿ ದೊಡ್ಡ ಗ್ರಾಮ ಪಂಚಾಯ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೂಲಕ ಅಂದಿನ ಗ್ರಾಮೀಣಾಭಿವೃದ್ದಿ ಪಂಚಾಯ್ತಿ ಸಚಿವರಾದ ಕೃಷ್ಣಬೈರೇಗೌಡರು ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ತ್ಯಾಜ್ಯ ವಿಲೆವಾರಿ ಘಟಕಕ್ಕೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ ಘಟಕ ಇಂದು ನಿರ್ವಹಣೆಯಿಲ್ಲದೇ ರೋಗಗ್ರಸ್ತ ಘಟಕವಾಗಿ ಸುತ್ತಮುತ್ತಲಿನ ನಾಗರೀಕರಿಗೆ ಬರಬಾರದ ರೋಗ ಹರಡುವ ಕೇಂದ್ರದಂತಾಗಿದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದ ಕೃಷ್ಣಬೈರೇಗೌಡರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅಂದಿನ ಜಿ.ಪಂ.ಸಿ.ಇ.ಓ.ಸೈಥಿಲ್ ಮತ್ತು ವೈಶಾಲಿ ಇವರು ಬೆಳಂ ಬೆಳಗ್ಗೆ ದಿಢೀರ್ ಭೇಟಿ ನೀಡಿ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ದೇಶವ್ಯಾಪಿ ಸಾಕಷ್ಟು ಪ್ರಚಾರ ಗಿಟ್ಟಿಸಿಕೊಂಡಂತಹ ಇಲ್ಲಿನ ತೀರ್ಥಹಳ್ಳಿ ರಸ್ತೆಯ ಮುಖ್ಯರಸ್ತೆಯಿಂದ ಹೊಸನಗರ ಸಂಪರ್ಕದ ಲಿಂಕ್ ರಸ್ತೆಯಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಓವರ್‌ಹೆಡ್ ಟ್ಯಾಂಕ್ ಸಹ ತೆರೆದುಕೊಂಡಿದ್ದು ಇದರಿಂದ ಉತ್ಪತ್ತಿಯಾಗುವ ಹುಳ ಹುಪ್ಪಟೆಗಳು ಟ್ಯಾಂಕ್ ನೀರಿಗೆ ಬಿದ್ದು ಇದೇ ನೀರಯನ್ನು ಕುಡಿಯುವಂತಾಗಿದೆ. ಈ ಘಟಕ ಇಂದು ನಿರ್ವಹಣೆಯಿಲ್ಲದೇ ರೋಗಗ್ರಸ್ತವಾಗಿ ಸುತ್ತಮುತ್ತಲಿನ ಗಾಂಧಿನಗರ ಮತ್ತು ಎಂ.ಜಿ.ಬಡಾವಣೆ ನೆಹರು ಬಡಾವಣೆಯ ಪ್ರಗತಿ ನಗರ ಗವಟೂರು, ಬೆಟ್ಟನಕೆರೆ, ಬೆಳೆಕೋಡು, ಕುಕ್ಕಳಲೇ, ಹಳಿಯೂರು ಇನ್ನಿತರ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳು ಮತ್ತು ನಿವಾಸಿಗಳಲ್ಲಿ ಇದೇ ರಸ್ತೆಯಲ್ಲಿ ಓಡಾಡುತ್ತಿದ್ದು ಈ ಘಟಕ ಕೊಳೆತ ಕಸದ ರಾಶಿಯಿಂದಾಗಿ ಅರೋಗ್ಯವಂತ ಮನುಷ್ಯ ಸಹ ಅನಾರೋಗ್ಯ ಪೀಡಿತರನ್ನಾಗಿಸುವ ಕೇಂದ್ರವಾಗಿ ಪರಿವರ್ತನೆಗೊಂಡಿದೆ.

ಮನೆ-ಮನೆಗೆ ತೆರಳಿ ಹಸಿ ಒಣ ಕಸ ಸಂಗ್ರಹಿಸಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೇರ್ಪಡಿಸುವ ಈ ಘಟಕದಲ್ಲಿ ಈ ಹಿಂದೆ ಊರಿನಲ್ಲೆಡೆ ಸಂಗ್ರಹಿಸಿದ ಕಸವನ್ನು ಎಲ್ಲೆಂದರಲ್ಲಿ ಬಿಸಾಕಿದ್ದು ಇದರಿಂದ ಸೊಳ್ಳೆಗಳ ಉತ್ಪಾದನೆಯೊಂದಿಗೆ ದುರ್ನಾತ ಬೀರುತ್ತಿದ್ದು ಶಾಲಾ, ಕಾಲೇಜ್ ವಿದ್ಯಾರ್ಥಿಗಳು ಮತ್ತು ಬಡಾವಣೆಯ ನಿವಾಸಿಗಳು ನಿತ್ಯ ಹಿಡಿ ಶಾಪ ಹಾಕುತ್ತಾ ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.

ಈ ರೋಗಗ್ರಸ್ಥ ತ್ಯಾಜ್ಯವಿಲೆವಾರಿ ಘಟಕಕ್ಕೆ ಸಮೀಪದಲ್ಲಿ ಮೇರಿಮಾತಾ ಪ್ರೌಢಶಾಲೆ ಮತ್ತು ಗುಡ್‌ಶಪರ್ಡ್ ಚರ್ಚ್ ಶಬರೀಶನಗರ, ಗಾಂಧಿನಗರ ಬಡಾವಣೆ ಹೊಂದಿಕೊಂಡಂತೆ ಈ ಬಡಾವಣೆಯ ಸಾರ್ವಜನಿಕರು ಗ್ರಾಮಾಡಳಿತಕ್ಕೆ ಹಾಗೂ ನೂತನ ಶಾಸಕ ಗೋಪಾಲಕೃಷ್ಣ ಮತ್ತು ಜಿಲ್ಲಾ ಪಂಚಾಯ್ತಿ ಸಿಇಓ ಡಿಹೆಚ್‌ಓ ಇತ್ತ ಗಮಹರಿಸುವುದರೊಂದಿಗೆ ರೋಗಗ್ರಸ್ಥ ತ್ಯಾಜ್ಯವಿಲೆವಾರಿ ಘಟಕಕ್ಕೆ ಮುಕ್ತಿ ಕಾಣಿಸುವರೇ ಕಾದು ನೋಡಬೇಕಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago