ರಿಪ್ಪನ್ಪೇಟೆ: ಮಲೆನಾಡಿನ ಮಳೆಗಾಲದಲ್ಲಿ ಜಾತ್ರಾ ಮಹೋತ್ಸವ ನಡೆಯುವುದೇ ವಿಶೇಷ. ಆದರೆ ಇಲ್ಲಿನ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ವರ್ಷದಲ್ಲಿ ಎರಡು ಬಾರಿ ಆಚರಿಸುವುದು ಇನ್ನೊಂದು ವಿಶೇಷವೇ ಸರಿ. ಇಂದು ನಡೆದ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ಸುಸಂಪನ್ನಗೊಂಡಿತು.
ಮುಂಜಾನೆ ದೇವಿಯ ವಿಶೇಷ ಪೂಜಾ ಕೈಂಕರ್ಯದೊಂದಿಗೆ ಆರಂಭಗೊಂಡ ದೇವಿಯ ಜಾತ್ರಾ ಕಾರ್ಯವು ದೇವಿಗೆ ಹೂವಿನ ಅಲಂಕಾರ, ಪೂಜೆ ಹಣ್ಣು-ಕಾಯಿ ಭಕ್ತಿಯ ಪರಕಾಷ್ಠತೆಯೊಂದಿಗೆ ಮಹಾಮಂಗಳಾರತಿ ಜರುಗಿತು.
ಬೇಸಿಗೆ ಜಾತ್ರೆಯಲ್ಲಿ ದೇವಿಗೆ ಹರಕೆ ಹೊತ್ತು ಹಲವರು ಹರಕೆ ಈಡೇರಿಸಿದ ತಾಯಿಗೆ ಉಡಿ ತುಂಬಿ ಹಣ್ಣು-ಕಾಯಿ ಭಕ್ತಿಯನ್ನು ಸಮರ್ಪಿಸಿದರೆ ಇನ್ನೂ ಹಲವು ಭಕ್ತರು ಹರಕೆ ಮಾಡಿಕೊಳ್ಳುವುದರೊಂದಿಗೆ ಹಣ್ಣು-ಕಾಯಿ ಅರ್ಪಿಸಿ ದೇವಿಯ ದರ್ಶನಾಶೀರ್ವಾದ ಪಡೆದರು.
ಎರಡು ಬಾರಿ ನಡೆಯುವ ಜಾತ್ರೆ :
ಸುಮಾರು 600 ವರ್ಷ ಇತಿಹಾಸವಿರುವ ಈ ಮಾರಿಕಾಂಬ ಜಾತ್ರೆ ಪ್ರತಿ ವರ್ಷದಲ್ಲಿ ಎರಡು ಬಾರಿ ಜರುಗುತ್ತದೆ. ಕರ್ನಾಟಕದ ಯಾವ ಭಾಗದಲ್ಲೂ ಶ್ರೀ ಮಾರಿಕಾಂಬ ದೇವಿಯ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ. ಮಳೆಗಾಲದ ಆಷಾಢ ಮಾಸದ ಮಂಗಳವಾರ ಹಾಗೂ ಬೇಸಿಗೆಯ ಶೂನ್ಯ ಮಾಸದ ಬುಧವಾರದಂದು ಜರುಗುವ ಈ ಜಾತ್ರೆಯಲ್ಲಿ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯದ ಭಕ್ತರು ಆಗಮಿಸಿ ಶ್ರೀದೇವಿಗೆ ಪೂಜೆ ಸಲ್ಲಿಸುತ್ತಾರೆ.
ಹಲವು ಮನೆತನ, ಸಹಸ್ರಾರು ಮನೆಗಳ ಆರಾಧ್ಯ ದೇವತೆ ಶ್ರೀ ಮಾರಿಕಾಂಬ ದೇವಿಗೆ ಜಾತ್ರೆ ಸಮಯದಲ್ಲಿ ಹಿಂದುಗಳಲ್ಲದೇ ಮುಸಲ್ಮಾನರು, ಕ್ರಿಶ್ಚಿಯನ್ನರು ಹಾಗೂ ಜೈನ ಧರ್ಮದವರೂ ಹರಕೆ ಕಾಣಿಕೆ, ಹಣ್ಣು- ಕಾಯಿ ಪೂಜೆ ಸಲ್ಲಿಸುವುದು ವಿಶೇಷ. ಶ್ರೀ ಮಾರಿಕಾಂಬ ದೇವಿ ಆರಾಧನೆಯಿಂದ ಸಾವಿರಾರು ಭಕ್ತಾದಿಗಳು ಒಳಿತು ಕಂಡಿದ್ದಾರೆ, ಕಾಣುತ್ತಿದ್ದಾರೆ.
ರಿಪ್ಪನ್ಪೇಟೆ, ಆಯನೂರು, ಆನಂದಪುರ, ಕೋಣಂದೂರು, ಹುಂಚ, ಹೊಸನಗರ, ಸಾಗರ, ಚೋರಡಿ, ಹಿತ್ತಲ ಕಲ್ಮನೆ, ಕುಂಸಿ, ಹಾರನಹಳ್ಳಿ, ಬೆಳ್ಳೂರು, ಬುಕ್ಕಿವರೆ, ಗರ್ತಿಕೆರೆ, ಹೆದ್ದಾರಿಪುರ, ಕೋಡೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸುಮಾರು 25 ಸಾವಿರಕ್ಕೂ ಅಧಿಕ ಭಕ್ತರು ಜಾತ್ರೆಗೆ ಆಗಮಿಸಿ ದೇವಿ ದರ್ಶನ ಪಡೆದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…