Categories: Ripponpete

ಅಪಾಯದ ಸ್ಥಿತಿಯಲ್ಲಿ ಸರ್ಕಾರಿ ಪ್ರೌಢಶಾಲೆಯ ಮೇಲ್ಛಾವಣಿ ; ಕಣ್ಮುಚ್ಚಿಕೊಂಡ ಆಡಳಿತ

ರಿಪ್ಪನ್‌ಪೇಟೆ: ಇಲ್ಲಿನ ಸರ್ಕಾರಿ ಪ್ರೌಢಶಾಲೆ ಕೆರೆಹಳ್ಳಿ ರಸ್ತೆಯ ಹಿಂಭಾಗದ ಕಟ್ಟಡದ ಮೇಲ್ಚಾವಣಿ ಸಂಪೂರ್ಣ ಅಪಾಯದ ಸ್ಥಿತಿಯಲ್ಲಿದ್ದು ಯಾವುದೇ ಸಮಯದಲ್ಲಿ ಕುಸಿದು ಬೀಳುತ್ತದೋ ಎಂಬ ಭಯದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಜೀವಭಯದಲ್ಲಿ ಕಾಲಕಳೆಯುವಂತಾಗಿದೆ.

ಈ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಆಂಗ್ಲ ಹಾಗೂ ಉರ್ದು ಮಾಧ್ಯಮ ಸೇರಿ ಸುಮಾರು 800 ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಈ ಕಟ್ಟಡಕ್ಕೆ ಹೊಂದಿಕೊಂಡಂತೆ ಬಿಸಿಯೂಟದ ಕೊಠಡಿ ಮತ್ತು ಇನ್ನಿತರ ಹೆಚ್ಚುವರಿ ಕೊಠಡಿಗಳು ಇವೆ. ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆ ಕೇಂದ್ರ ಸ್ಥಾನವಾಗಿದ್ದು ಇಲ್ಲಿನ ಶಾಲಾ ಕೊಠಡಿಯಲ್ಲಿ ಪರೀಕ್ಷೆ ಬರೆಯಲಾಗುತ್ತಿದ್ದು ದುಸ್ಥಿತಿಯಲ್ಲಿರುವ ಈ ಕಟ್ಟಡಕ್ಕೆ ಹೊಂದಿಕೊಂಡಿರುವ ಕೊಠಡಿಯಲ್ಲಿ ಪರೀಕ್ಷೆ ಬರೆಯುವಾಗ ಆಕಸ್ಮಿಕವಾಗಿ ಮೇಲ್ಚಾವಣಿ ಕುಸಿದು ಬಿದ್ದರೆ ಹೊಣೆ
ಯಾರು. ಏನಾದರೂ ಅನಾಹುತಗಳು ಸಂಭವಿಸುವ ಮುನ್ನ ಎಚ್ಚರಗೊಂಡು ಈ ಶಿಥಿಲ ಕಟ್ಟಡದ ಮೇಲ್ಛಾವಣಿಯನ್ನು ತೆರವುಗೊಳಿಸುವರೆ ಕಾದು ನೋಡಬೇಕಾಗಿದೆ.

ಈ ಹಿಂದೆ ಇದ್ದಂತಹ ಮುಖ್ಯೋಪಾಧ್ಯಾಯ ಗೋಪಾಲರಾವ್ ಅವಧಿಯಲ್ಲಿ ಹಳೇ ವಿದ್ಯಾರ್ಥಿಗಳಿಂದ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಂದ 10 ರೂಪಾಯಿಯಂತೆ ದೇಣಿಗೆ ಸಂಗ್ರಹಿಸಿ ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸಿಕೊಂಡು ಗ್ರಾಮೀಣ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಹೆಚ್ಚು ಆಸಕ್ತಿ ವಹಿಸಿದಂತಹ ಮುಖ್ಯೋಪಾಧ್ಯಾರ ಸಾಮಾಜಿಕ ಕಳಕಳಿ ಮೆಚ್ಚುವಂತದಾಗಿದ್ದು ಇದಕ್ಕೆ ಗ್ರಾಮದ ಹಿರಿಯರು ಪೋಷಕ ವರ್ಗ ಸಹ ಕೈಜೋಡಿಸಿದ ಪ್ರತಿಫಲದಿಂದಾಗಿ ಇಲ್ಲಿನ ಹೈಸ್ಕೂಲ್ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಮತ್ತು ಉತ್ತಮ ಫಲಿತಾಂಶದೊಂದಿಗೆ ಕ್ರೀಡಾ ಚಟುವಟಿಕೆಯಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿ ಕೀರ್ತಿ ಪತಾಕೆಯನ್ನು ಹಾರಿದೆ ಆದರೆ ಈಗ ಈ ಶಾಲಾ ಮೇಲ್ಛಾವಣಿ ಅಪಾಯದ ಸ್ಥಿತಿಯಲ್ಲಿದ್ದು ಸ್ಥಳೀಯ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನಕ್ಕೆ ಬಂದರೂ ಕೂಡಾ ಕಣ್ಮುಚ್ಚಿಕೊಂಡಿರುವುದು ಪೋಷಕರಲ್ಲಿ ಸಾರ್ವಜನಿಕರಲ್ಲಿ ತೀವ್ರ ನೋವುಂಟು ಮಾಡಿದೆ.

ಇನ್ನಾದರೂ ಈ ದುಸ್ಥಿತಿಯಲ್ಲಿರುವ ಈ ಕಟ್ಟಡದ ದುರಸ್ಥಿ ಕಾರ್ಯಕ್ಕೆ ಬೇಸಿಗೆ ರಜೆಯಲ್ಲಿ ಮುಂದಾಗುವ ಮೂಲಕ ಅಪಾಯದಿಂದ ಪಾರು ಮಾಡುವರೆ ಕಾದು ನೋಡಬೇಕಾಗಿದೆ.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

6 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

12 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

20 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago