Categories: Ripponpete

ಅಪ್ರಾಪ್ತೆಗೆ ಗರ್ಭಿಣಿ ಮಾಡಿ 17 ತಿಂಗಳು ಜೈಲಿನಲ್ಲಿದ್ದು ಬಂದ ಆರೋಪಿ ಮತ್ತೆ ಅದೇ ಬಾಲಕಿಗೆ ಮದುವೆಯಾಗುತ್ತೇನೆಂದು ಪುಸಲಾಯಿಸಿ ರೋಡ್ ಗೋಲ್ಡ್ ತಾಳಿ ಕಟ್ಟಿ ಗರ್ಭಿಣಿ ಮಾಡಿ ಪೊಕ್ಸೋ ಕಾಯ್ದೆಯಡಿ ಮತ್ತೆ ಜೈಲುಪಾಲು !

ರಿಪ್ಪನ್‌ಪೇಟೆ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನನ್ನು ಬಂಧಿಸಿದ ಘಟನೆ ನಡೆದಿದೆ.

ಹುಂಚ ಗ್ರಾಪಂ ವ್ಯಾಪ್ತಿಯ ಯುವಕ ಮನೋಜ್ (23) ಈತನನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ದು ನೊಂದ ಬಾಲಕಿ ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ ?

ನೊಂದ ಬಾಲಕಿಯ ತಂದೆ ಸುಮಾರು 15 ವರ್ಷಗಳ ಹಿಂದೆ ತೀರಿಕೊಂಡಿದ್ದು ತಾಯಿ ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ಈ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು ಹಿರಿಯವನು ಡ್ರೈವಿಂಗ್ ಕೆಲಸ ಮಾಡಿಕೊಂಡಿರುತ್ತಾನೆ. ನೊಂದ ಬಾಲಕಿಯು 9ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿಕೊಂಡು ಮನೆಯಲ್ಲಿಯೇ ಇರುತ್ತಾರೆ. ಮನೋಜ್ ಎಂಬಾತನು ನೊಂದ ಬಾಲಕಿಯನ್ನು ಪುಸಲಾಯಿಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದರಿಂದ ಗರ್ಭಿಣಿಯಾಗಿ ಶಿವಮೊಗ್ಗ ಸುರಭಿ ಕೇಂದ್ರದಲ್ಲಿ ಸುಮಾರು 14 ತಿಂಗಳು ಇದ್ದು 2021ರ ಫೆ. 20ರಂದು ವಾಪಾಸ್ ಮನೆಗೆ ಹೋಗಿದ್ದು ಇವರಿಗೆ ಜನಿಸಿದ ಗಂಡು ಮಗುವನ್ನು ಸರಕಾರಕ್ಕೆ (ದತ್ತುಕೇಂದ್ರ) ನೀಡಿರುತ್ತಾರೆ.


ಆರೋಪಿ ಮನೋಜ್ ಈತನು ಸುಮಾರು 17 ತಿಂಗಳು
ಜೈಲಿನಲ್ಲಿದ್ದು ನಂತರ ಕೇಸನ್ನು ನ್ಯಾಯಾಲಯದಲ್ಲಿ ರಾಜಿ ಮಾಡಿಕೊಂಡಿರುತ್ತಾರೆ. ಮನೋಜ್ ನು ಜೈಲಿನಿಂದ ಬಿಡುಗಡೆಯಾದ ನಂತರ ಸಂತ್ರಸ್ಥ ಬಾಲಕಿಯೊಂದಿಗೆ ಪುನಃ ಸಂಪರ್ಕ ಬೆಳೆಸಿ ಮಾತನಾಡುತ್ತಿದ್ದು ನೊಂದ ಬಾಲಕಿಯ ಮನೆಗೆ ಪದೆ ಪದೆ ಬರುತ್ತಿದ್ದು, ನಿನ್ನನ್ನು ಮದುವೆಯಾಗುತ್ತೇನೆ ಬಲವಂತವಾಗಿ 2022 ರ ಮಾ.03 ರಂದು ನೊಂದ ಬಾಲಕಿಯನ್ನು ಕರೆದುಕೊಂಡು ಹೋಗಿ ಹೊರನಾಡಿನ ಗಣಪತಿ ದೇವಸ್ಥಾನದಲ್ಲಿ ಅಂಗಡಿಯಲ್ಲಿ ಸಿಗುವ ತಾಳಿಸರವನ್ನು ನೊಂದ ಬಾಲಕಿಯ ಕೊರಳಿಗೆ ಹಾಕಿ ಮದುವೆಯಾಗಿರುತ್ತಾನೆ. ನಂತರ ಆತನ ಮನೆಗೆ ಕರೆದುಕೊಂಡು ಹೋಗಿರುತ್ತಾನೆ.

ಮರುದಿನ ಮಾ.12 ರಂದು ನೊಂದ ಬಾಲಕಿ ಬೇಡ ಎಂದರೂ ಕೇಳದ ಆರೋಪಿ ನಾವಿಬ್ಬರೂ ಗಂಡ-ಹೆಂಡತಿ ಅಂತ ಹೇಳಿ ಬಲವಂತವಾಗಿ ದೈಹಿಕ ಸಂಪರ್ಕ ಹೊಂದಿ ಅತ್ಯಾಚಾರ ಮಾಡಿರುತ್ತಾನೆ. ನಂತರ ಸುಮಾರು 2 ತಿಂಗಳ ನಂತರ ನೊಂದ ಬಾಲಕಿಯು ಗರ್ಭಾವತಿಯಾಗಿರುತ್ತಾರೆ. ಫೆ.21 ರಂದು ಹೆಣ್ಣು ಮಗುವಿಗೆ ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಯಲ್ಲಿ ಜನ್ಮ ನೀಡಿರುತ್ತಾರೆ.
ನೊಂದ ಬಾಲಕಿಯ ಮದುವೆಗೆ ಆರೋಪಿ ಮನೋಜ್ ರವರ ತಂದೆ-ತಾಯಿಯವರು ಕುಮ್ಮಕ್ಕು ನೀಡಿದ್ದರಿಂದ ಮದುವೆಯಾಗಿರುತ್ತಾರೆ. ನೊಂದ ಬಾಲಕಿಯನ್ನು ಬಲವಂತವಾಗಿ ಅತ್ಯಾಚಾರ ಮಾಡಿ ಮಗು ಜನಿಸಲು ಕಾರಣಕರ್ತನಾದ ಮನೋಜ್ ರವರ ಮೇಲೆ ಕಾನೂನು ಕ್ರಮ ಜರುಗಿಸಬೇಕಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಘಟನೆ ಸಂಬಂಧ ಕಲಂ 376(2)(ಎನ್) ಐಪಿಸಿ, ಕಲಂ 6,17 ಪೋಕ್ಸೋ ಕಾಯ್ದೆ 2012 ಹಾಗೂ ಕಲಂ 09,11 ಚೈಲ್ಡ್ ಮ್ಯಾರೇಜ್ ಆಕ್ಟ್ ಅಡಿ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

6 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

8 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

9 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

14 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

15 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago