ರಿಪ್ಪನ್ಪೇಟೆ: ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನಃ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಆಯೋಗದವರು 2018ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷ್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಬ್ಯಾನರ್ಗಳೇ ಸಾಕ್ಷಿಕರಿಸುತ್ತಿವೆ.
ಈಗಾಗಲೇ 2023ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ ಕೂಡಾ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಬಳಿಯಲ್ಲಿ ಅಳವಡಿಸಲಾಗಿರುವ 2018ನೇ ವರ್ಷದ ಚುನಾವಣಾ ಆಯೋಗದ ವಿಧಾನಸಭಾ ಚುನಾವಣಾ ಫ್ಲೆಕ್ಸ್ ತೆರವುಗೊಳಿಸದೇ ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸಾರ್ವಜನಿಕರು ಕ್ಷಣ ಕಾಲ ನಾಡಕಛೇರಿಯ ಮತ್ತು ಗ್ರಾಮ ಪಂಚಾಯ್ತಿ ಬಳಿಯಲ್ಲಿನ 2018ರ ವಿಧಾನಸಭಾ ಚುನಾವಣೆ ಬ್ಯಾನರ್ ನೋಡಿ ನಾವುಗಳು ಇನ್ನೂ ಸರ್ಕಾರದ ಚುನಾವಣಾ ಆಯೋಗದ ನೀತಿಯಂತೆ ನಾವು 2018 ರ ವಿಧಾನಸಭಾ ಚುನಾವಣೆಯಲ್ಲಿ ಇದ್ದೇವೆ ಎನ್ನುವಂತಾಗಿದೆ. ಇನ್ನಾದರೂ ಎಚ್ಚೆತ್ತು 2018 ರ ಬ್ಯಾನರ್ ತೆರವುಗೊಳಿಸಲು ಮುಂದಾಗುವರೆ ಕಾದು ನೋಡಬೇಕಾಗಿದೆ.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…