Categories: Ripponpete

ಎರಡು ಬಾರಿ ಶಾಸಕರಾಗಿ ಕ್ಷೇತ್ರದ ಸಮಸ್ಯೆ ಕುರಿತು ಶಾಸನಸಭೆಯಲ್ಲಿ ಧ್ವನಿ ಎತ್ತದವರಿಂದ ಅಭಿವೃದ್ಧಿ ಸಾಧ್ಯವೇ ? ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಕಳೆದ ಎರಡು ಭಾರಿ ಶಾಸಕರಾಗಿ ಕ್ಷೇತ್ರದ ಸಮಸ್ಯೆಗಳ ಕುರಿತು ವಿಧಾನಸಭೆಯ ಅಧಿವೇಶನದಲ್ಲಿ ಧ್ವನಿ ಎತ್ತದದವರಿಂದ ಕ್ಷೇತ್ರದ ಅಭಿವೃದ್ಧಿ ಹೇಗೆ ಸಾಧ್ಯವಾಗುವುದು ? ನಾನು ಹೊಸನಗರ ಕ್ಷೇತ್ರದಲ್ಲಿ ಈ ಹಿಂದೆ ಶಾಸಕರಾಗಿದ್ದ ಅವಧಿಯಲ್ಲಿ ಮಾಡಿದಂತಹ ಕೆಲಸಗಳು ಬಿಟ್ಟರೆ ನಂತರದಲ್ಲಿ ಯಾವುದೇ ಅಭಿವೃದ್ದಿ ಕಾರ್ಯಗಳು ಆಗಿಲ್ಲ ಎಂದು ಕ್ಷೇತ್ರದ ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.


ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸುಮಾರು 5.50 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅಭಿನಂದನೆ ಸ್ವೀಕರಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಾಗರ ರಸ್ತೆಯ ಕಾಲೇಜ್ ಬಳಿಯಿಂದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಮಾಡುವುದರ ಮೂಲಕ ಡಿವೈಡರ್ ಅಳವಡಿಸಿ ಶಾಲಾ ಮಕ್ಕಳು ಯಾವುದೇ ಭಯವಿಲ್ಲದೇ ಓಡಾಡಲು ಸುಸಜ್ಜಿತ ರಸ್ತೆ ನಿರ್ಮಿಸಲು ಗ್ರಾಮದವರು ಸಹಕರ ನೀಡುವಂತೆ ಕೋರಿ ಮುಂದಿನ ದಿನಗಳಲ್ಲಿ ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೊಸನಗರ-ಶಿವಮೊಗ್ಗ-ಸಾಗರ-ತೀರ್ಥಹಳ್ಳಿ ರಸ್ತೆಯ ನಾಲ್ಕು ಕಿ.ಮೀ.ರಸ್ತೆಯನ್ನು ಅಭಿವೃದ್ದಿ ಪಡಿಸಲು ಹೆಚ್ಚಿನ ಅನುದಾನ ತರುವುದಾಗಿ ಹೇಳಿದರು.


ಎರಡು ವರ್ಷಗಳ ಕಾಲ ಶಾಸಕರಾಗಿ ಕಾರ್ಯ ನಿರ್ವಹಿಸಿ ವಿಧಾನಸಭಾ ಕಲಾಪದಲ್ಲಿ ಒಂದು ಮಾತನ್ನು ಆಡದೇ
ರೇಸಾರ್ಟ್ ರಾಜಕಾರಣ ಮಾಡಿಕೊಂಡು ಅಧಿಕಾರ ಅನುಭವಿಸಿ ಈಗ ಮಾಜಿಯಾಗಿರುವ ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರೊಬ್ಬರು ಕಲರ್ ಕಲರ್ ಬಟ್ಟೆ ಹಾಕಿಕೊಂಡು ಕಪ್ಪು ಕನ್ನಡ ಬಳಸಿ ಬಂಗಾರಪ್ಪರಂತಾಗಲು ಹೋಗುತ್ತಿದ್ದಾರೆ. ಬಂಗಾರಪ್ಪನವರಿಗೆ ಸರಿಸಾಟಿ ಯಾರು ಇಲ್ಲ ಅವರ ವ್ಯಕ್ತಿತ್ವವೇ ಬೇರೆ ಎಂದ ಅವರು ಮದುವೆ ಮನೆ ಮಕ್ಕಳ ಹುಟ್ಟು ಹಬ್ಬ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಶುಭಸಮಾರಂಭಗಳಲ್ಲಿ ಭಾಗವಹಿಸಿ ಅಲ್ಲಿ ನೆರದವರ ಹೆಗಲ ಮೇಲೆ ಕೈಹಾಕಿಕೊಂಡು ಪೋಟೋ ಪೋಸ್ ಕೊಡುವುದು ಅಭಿವೃದ್ದಿಯ ಸಂಕೇತವಲ್ಲ. ಹಾಗೆಯೇ ಕ್ಷೇತ್ರದಲ್ಲಿ ಅಗಿರುವಂತಹ ಅಭಿವೃದ್ದಿ ಕಾರ್ಯಗಳನ್ನು ಸಹಿಸದೇ ಹೊಟ್ಟೆಕಿಚ್ಚಿನಿಂದ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಮತದಾರರನ್ನು ದಿಕ್ಕು ತಪ್ಪಿಸಲು ಸಾಧ್ಯವಿಲ್ಲ, ಹೊಟ್ಟೆ ಕಿಚ್ಚು ಬಿಟ್ಟು ಸ್ವಾಭಿಮಾನದಿಂದ ಇರಲಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಪರೋಕ್ಷವಾಗಿ ಕುಟುಕಿದರು.


ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಕಂಡಿದ್ದು ಸಾಕಷ್ಟು ಅಭಿವೃದ್ದಿ ಕಾರ್ಯಗಳು ಪ್ರಗತಿಯಲ್ಲಿದ್ದು ಕೋಟ್ಯಂತರ ರೂಪಾಯಿಗಳ ಅನುದಾನವನ್ನು ಡಬಲ್ ಇಂಜಿನ್ ಸರ್ಕಾರ ಕ್ಷೇತ್ರದ ಅಭಿವೃದ್ದಿಗೆ ನೀಡಿದೆ ಎಂದು ಹೇಳಿದ ಅವರು ಈ ಭಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಮತ ನೀಡುವುದರ ಮೂಲಕ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ದಿಗೆ ಸಹಕರಿಸಬೇಕು ಎಂದರು.


ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷ್ಮಿ, ಬಿಜೆಪಿ ತಾಲ್ಲೂಕ್ ಅಧ್ಯಕ್ಷ ಗಣಪತಿ ಬಿಳಗೋಡು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಮುಖಂಡರುಗಳು ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

Malnad Times

Recent Posts

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

22 mins ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

5 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

7 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

20 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

22 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

23 hours ago