Categories: Ripponpete

ಎರಡ್ಮೂರು ತಿಂಗಳು ಕಳೆದರು ರಸ್ತೆ ಕಾಮಗಾರಿ ಅಪೂರ್ಣ ; ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ

ರಿಪ್ಪನ್‌ಪೇಟೆ: ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿ ಅರಸಾಳು ಗ್ರಾಮ ಪಂಚಾಯ್ತಿ ಬೆನವಳ್ಳಿ ಗ್ರಾಮದಲ್ಲಿ ಕಳೆದ ಎರಡ್ಮೂರು ತಿಂಗಳ ಹಿಂದೆ ಡಾಂಬರೀಕರಣಕ್ಕೂ ಕಾಂಕ್ರೀಟ್ ರಸ್ತೆ ನಿರ್ಮಿಸುವ ಉದ್ದೇಶದಿಂದ ರಸ್ತೆ ಕಿತ್ತು ಜಲ್ಲಿ ಕಲ್ಲು ಹಾಕಿದ ಗುತ್ತಿಗೆದಾರನೂ ಇಲ್ಲ ರಸ್ತೆಯೋ ಇಲ್ಲದೆ ಇಲ್ಲಿನ ನಿವಾಸಿಗಳು ಹಿಡಿ ಶಾಪ ಹಾಕುವಂತಾಗಿದೆ ಎಂದು ಬೆನವಳ್ಳಿ ಗ್ರಾಮಸ್ಥರಾದ ವೀರೇಶ್, ನಾಗಾರ್ಜುನ, ಸುರೇಶ್‌ಗೌಡ, ಶಾಂತಪ್ಪಗೌಡ ಇನ್ನಿತರರು ಆರೋಪಿಸಿದ್ದಾರೆ.


ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಚುನಾವಣೆಯಲ್ಲಿ ಹೇಗಾದರೂ ಕ್ಷೇತ್ರದ ಜನಪ್ರತಿನಿಧಿಗಳು ಗ್ರಾಮಕ್ಕೆ ಮತಯಾಚನೆಗೆ ಬರಲೇಬೇಕು ಆಗ ನಾವುಗಳು ಚುನಾವಣೆ ಬಹಿಷ್ಕಾರದ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿ ಸಾಕಷ್ಟು ಬಹಿರಂಗ ಚರ್ಚೆಗಳು ವ್ಯಕ್ತಗೊಳ್ಳುತ್ತಿದ್ದು ಕ್ಷೇತ್ರದ ಶಾಸಕರಿಗೆ ಈ ರಸ್ತೆ ಅಭಿವೃದ್ದಿ ಪೂರ್ಣಗೊಂಡತೆ ಕಾಣುತ್ತಿದೆಯೋ ಎಂಬ ಜಿಜ್ಞಾಸೆ ಒಂದು ಕಡೆಯಾದರೆ ಇನ್ನೊಂದು ಕಡೆಯಲ್ಲಿ ಅವರಿಗೂ ಈ ರಸ್ತೆ ಅಭಿವೃದ್ಧಿಯಾಗುವುದು ಇಷ್ಟ ಇಲ್ಲವೂ ಎಂಬಂತಾಗಿದೆ ಎಂದು ಗ್ರಾಮಸ್ಥರಲ್ಲಿ ಸುದ್ದಿಗೆ ಗ್ರಾಸವಾಗಿದೆ.


ನಿತ್ಯ ನೂರಾರು ವಿದ್ಯಾರ್ಥಿಗಳು ವಯೋವೃದ್ದರು ಅನಾರೋಗ್ಯ ಪೀಡಿತರು ಹೀಗೆ ಹಲವು ರೈತನಾಗರೀಕರು ಓಡಾಡುವ ಈ ರಸ್ತೆ ಕಳೆದ ಮೂರು ನಾಲ್ಕು ತಿಂಗಳ ಹಿಂದೆ ಅಭಿವೃದ್ದಿಪಡಿಸುವ ಉದ್ದೇಶದಿಂದ ಇದ್ದ ರಸ್ತೆಯನ್ನು ಕಿತ್ತು ಜಲ್ಲಿಕಲ್ಲು ಹರಡಿ ಹೋದವರು ಈವರೆಗೂ ಇತ್ತ ತಲೆ ಹಾಕಿರುವುದಿಲ್ಲ ಎಂದು ಗ್ರಾಮಸ್ಥರು ತಮ್ಮ ನೋವನ್ನು ಮಾಧ್ಯಮದವರ ಬಳಿ ಹಂಚಿಕೊಳ್ಳುವುದರೊಂದಿಗೆ ಈ ಭಾರಿಯ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದರ ಬಗ್ಗೆ ಸದ್ಯದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಎಚ್ಚರಿಕೆ ನೀಡಿದರು.

Malnad Times

Recent Posts

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

25 mins ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

13 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

16 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

16 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

17 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

18 hours ago