Categories: Ripponpete

ಒತ್ತುವರಿ ಹೆಸರಿನಲ್ಲಿ ಅರಣ್ಯ ನಾಶ ; ಕಂದಾಯ, ಅರಣ್ಯ ಇಲಾಖೆಯ ನಿರ್ಲಕ್ಷ್ಯ ಆರೋಪ

ರಿಪ್ಪನ್‌ಪೇಟೆ: ಸಮೀಪದ ಬಾಳೂರು ಗ್ರಾಮ ಪಂಚಾಯತ್ ನಿರ್ಮಿಸಿದ್ದ ಅಕೇಶಿಯ ನೆಡುತೋಪು ಅರಣ್ಯವನ್ನು ಒತ್ತುವರಿ ಹೆಸರಿನಲ್ಲಿ ಖಾಸಗಿ ವ್ಯಕ್ತಿಗಳು ಈ ಜಾಗವನ್ನು ಅಕ್ರಮವಾಗಿ ಕಡಿತಲೆ ಮಾಡಿ ದಿಢೀರ್ ಶೆಡ್ ನಿರ್ಮಿಸಿರುವ ಘಟನೆ ಕುಕ್ಕಳಲೇ ಗ್ರಾಮದ ಮಜರೆ ಈಚಲುಕೊಪ್ಪದಲ್ಲಿ ನಡೆದಿದೆ.

ಕುಕ್ಕಳಲೇ ಗ್ರಾಮದ ಸರ್ವೇ ನಂಬರ್ 13 ರಲ್ಲಿ 6 ಎಕರೆ ಜಾಗದಲ್ಲಿ ಗ್ರಾಮಾಡಳಿತವು 2-12-13ನೇ ಸಾಲಿನಲ್ಲಿ ಅರಣ್ಯೀಕರಣ ಯೋಜನೆಯಲ್ಲಿ ಅಕೇಶಿಯಾ ಗಿಡಗಳನ್ನು ನೆಟ್ಟು ಪೋಷಿಸಿದೆ. 2022-23 ನೇ ಸಾಲಿನಲ್ಲಿ ಇಂಗುಗುಂಡಿ ನಿರ್ಮಾನ ಮಾಡುವುದರೊಂದಿಗೆ ಸುಮಾರು 3 ಲಕ್ಷ ರೂ. ಅನುದಾನವನ್ನು ಬಳಸಿಕೊಂಡಿದೆ. ಇದರಲ್ಲಿಯೇ ಸುಮಾರು 2 ಎಕರೆ ಜಾಗವನ್ನು ಗ್ರಾಮಸ್ಥರ ಉಪಯೋಗಕ್ಕಾಗಿ ಸ್ಮಶಾನವನ್ನಾಗಿ ಕಾಯ್ದಿರಿಸಿಕೊಳ್ಳಲಾಗಿತ್ತು. ಆದರೆ ಕುಕ್ಕಳಲೇ ಗ್ರಾಮದ ಕೆಲವು ವ್ಯಕ್ತಿಗಳು ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಿ ನೀರಿನ ಮೂಲವಿಲ್ಲದಿದ್ದರೂ ಅಡಿಕೆ ಗಿಡಗಳನ್ನು ನಡಸಲಾಗಿದೆ.

ಬೆಳೆದು ನಿಂತ ಅಕೇಶಿಯ ಮರಗಳನ್ನು ಕಡಿದು ಸುಟ್ಟು ಜಾಗವನ್ನು ಸಮತಟ್ಟುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ. ಇದರಿಂದ ಸುತ್ತಮುತ್ತಲಿನ 10-15 ಎಕರೆ ಅರಣ್ಯ ವಿರುವ ಕಂದಾಯ ಭೂಮಿಯನ್ನು ಆಕ್ರಮ ಕಬಳಿಕೆಯ ಹುನ್ನಾರ ನಡೆಸಿದ್ದು ಸಂಬಂಧಪಟ್ಟ ಕಂದಾಯ ಅರಣ್ಯ ಗ್ರಾಮಾಡಳಿತ ಅಧಿಕಾರಿಗಳು ಕೂಡಲೇ ತೆರವುಗೊಳಿಸಿ ಗ್ರಾಮಾಭಿವೃದ್ದಿಗಾಗಿ ಜಾಗವನ್ನು ಉಳಿಸುವಲ್ಲಿ ಇಲಾಖೆಯ ಅಧಿಕಾರಿಗಳು ಮುಂದಾಗುವರೇ ಕಾದು ನೋಡಬೇಕಾಗಿದೆ ಎಂದು ಕುಕ್ಕಳಲೇ ಗ್ರಾಮಸ್ಥರ ಒತ್ತಾಸೆಯಾಗಿದೆ.

ವರುಣನ ಕೃಪೆಗಾಗಿ ಮೂಲೆಗದ್ದೆ ಶ್ರೀಗಳಿಂದ ಮೌನ ಶಿವಜಪಾನುಷ್ಠಾನ ಪೂಜೆ

ರಿಪ್ಪನ್‌ಪೇಟೆ: ಶ್ರಾವಣ ಮಾಸದಲ್ಲಿ ಶಿವಪೂಜೆಯೊಂದಿಗೆ ಶಿವಮಂತ್ರ ಪಠಣ ಮಾಡುವುದರಿಂದ ಪಾಪ ದೂರವಾಗಿ ಪುಣ್ಯಪ್ರಾಪ್ತಿಯಾಗುವುದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು.

ಅವರು ಸಮೀಪದ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಮಠದಲ್ಲಿ “ಶ್ರಾವಣ ಮಾಸದ ಅಂಗವಾಗಿ ಆಯೋಜಿಸಲಾದ ಶಿವಪೂಜೆ’’ ಕಾರ್ಯಕ್ರಮದೊಂದಿಗೆ ಮಳೆಯಿಲ್ಲದೇ ರೈತರು ಕಂಗಾಲಾಗಿದ್ದು ವರುಣನ ಕೃಫೆಗಾಗಿ ಶ್ರೀಗಳು ಮೌನಜಪಾನುಷ್ಟಾನ ಶಿವಪೂಜೆಯನ್ನು ನೆರವೇರಿಸಿದರು.
ಈ ಪೂಜಾ ಕಾರ್ಯದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿ ದರ್ಶನಾಶೀರ್ವಾದ ಪಡೆದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago