ಓಮ್ನಿ ವಾಹನದಲ್ಲಿ ಜಾನುವಾರು ಕಳ್ಳ ಸಾಗಾಣಿಕೆಗೆ ಯತ್ನ ; ಗ್ರಾಮಸ್ಥರಿಂದ ಧರ್ಮದೇಟು

0 2,635

ರಿಪ್ಪನ್‌ಪೇಟೆ: ಜಾನುವಾರುಗಳನ್ನು ಕಳ್ಳತನ ಮಾಡಿಕೊಂಡು ಓಮ್ನಿ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯನ್ನಾದರಿ ಗ್ರಾಮಸ್ಥರು ವಾಹನವನ್ನು ತಡೆದು ತಪಾಸಣೆಗೆ ಮುಂದಾಗುತ್ತಿದ್ದಂತೆ ವಾಹನ ಚಾಲಕ ತಪ್ಪಿಸಿಕೊಂಡು ಪರಾರಿಯಾಗಿದ್ದು ಇನ್ನೋರ್ವ ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿದ ಘಟನೆ ಶುಕ್ರವಾರ ರಾತ್ರಿ ಕೆಂಚನಾಲ ಗ್ರಾಮದಲ್ಲಿ ನಡೆದಿದೆ.

ಸಮೀಪದ ಆಚಾಪುರ ಗ್ರಾಮದವರೆಂದು ಹೇಳಲಾಗುತ್ತಿದ್ದು ಎರಡು ಜಾನುವಾರುಗಳನ್ನು ಮತ್ತು ಓರ್ವ ಆರೋಪಿಯನ್ನು ಹಿಡಿದ ಕೆಂಚನಾಲ ಗ್ರಾಮಸ್ಥರು ಠಾಣೆಗೆ ಒಪ್ಪಿಸಿದ್ದಾರೆ.

ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave A Reply

Your email address will not be published.

error: Content is protected !!