ಕಬ್ಬು ತುಂಬಿದ್ದ ಲಾರಿ ಪಲ್ಟಿ, ಓರ್ವ ಕಾರ್ಮಿಕನಿಗೆ ಗಂಭೀರ ಗಾಯ !

0 951

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಬ್ಬು ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಓರ್ವ ಕಾರ್ಮಿಕನಿಗೆ ಗಂಭೀರವಾದ ಗಾಯವಾದ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿಂದು ನಡೆದಿದೆ.

ಕಬ್ಬು ತುಂಬಿಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಗಣಪತಿ ಶೆಟ್ಟಿ ಎಂಬ ಕಾರ್ಮಿಕನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ 108 ಅಂಬುಲೆನ್ಸ್ ಮೂಲಕ ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಲಾರಿಯಲ್ಲಿ ಒಟ್ಟು ಆರು ಜನರಿದ್ದು ಇವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.

error: Content is protected !!