ರಿಪ್ಪನ್ಪೇಟೆ : ಪಟ್ಟಣದ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ (68) ಅವರು ಸೋಮವಾರ ಮೂರು ವರ್ಷದ ಮೊಮ್ಮಗನೊಂದಿಗೆ ಜಮೀನಿಗೆ ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದರು.
ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣುಗಳನ್ನು ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು. ಮಧ್ಯಾಹ್ನವಾದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತದೇಹ ಪತ್ತೆಯಾಗಿತ್ತು. ಹೃದಯಾಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇಬ್ಬರು ಪುತ್ರಿಯರು ಇದ್ದಾರೆ.
ವಿದ್ಯುತ್ ಇಲ್ಲದ ಶವಗಾರ ನಾಗರಿಕರ ಆಕ್ರೋಶ :
ರಿಪ್ಪನ್ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಯ ತಪಾಸಣೆಗೆ ತಂದಾಗ ವೈದ್ಯರು ಮೊಬೈಲ್ ಟಾರ್ಚ್ ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ನಡೆಸಿದರು. ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಹಗಲು ವೇಳೆಯಲ್ಲಿ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿರುವ ಈ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರುವುದಿಲ್ಲ. ಈ ಬಗ್ಗೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ವೈಧ್ಯಾಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…