ಕೆಂಚನಾಲ ಗ್ರಾ.ಪಂ. ಅಧ್ಯಕ್ಷರಾಗಿ ಉಬೇದುಲ್ಲಾ ಷರಿಫ್, ಉಪಾಧ್ಯಕ್ಷರಾಗಿ ರಮ್ಯ ಆಯ್ಕೆ
ರಿಪ್ಪನ್ಪೇಟೆ: ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಉಬೇದುಲ್ಲಾ ಷರೀಫ್ ಉಪಾಧ್ಯಕ್ಷರಾಗಿ ರಮ್ಯ ಶಶಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೆಂಚನಾಲ ಗ್ರಾಮ ಪಂಚಾಯ್ತಿ ಎರಡನೇ ಅವಧಿಗೆ ಇಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಅಧ್ಯಕ್ಷ ಸ್ಥಾನಕ್ಕೆ ಉಬೇದುಲ್ಲಾ ಷರೀಪ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರಮ್ಯ ಶಶಿಕುಮಾರ್ ನಾಮಪತ್ರ ಸಲ್ಲಿಸಿದ್ದು ಪ್ರತಿಸ್ಪರ್ಧಿ ಇಲ್ಲದ ಕಾರಣ ಚುನಾವಣಾಧಿಕಾರಿ ಹೊಸನಗರ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ಸಹಾಯಕ ಕಾರ್ಯಾಪಾಲಕ ಅಭಿಯಂತರ ಶಿವಪ್ರಸಾದ್ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಪುಟ್ಟಮ್ಮ, ಮಹಮದ್ಷರೀಫ್, ಕೃಷ್ಣೋಜಿರಾವ್, ಹೂವಮ್ಮ, ಕಾಂಗ್ರೆಸ್ ಪಕ್ಷದ ಮುಖಂಡರಾದ ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿ.ಪಂ.ಮಾಜಿ ಸದಸ್ಯ ಬಂಡಿ ರಾಮಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಅರಸಾಳು ಗ್ರಾ.ಪಂ.ಸದಸ್ಯ ಉಮಾಕರ್, ಮಳವಳ್ಳಿ ಮಂಜುನಾಥ, ಪಿಡಿಓ ರವಿಕುಮಾರ್ ಇನ್ನಿತರ ಹಲವರು ಹಾಜರಿದ್ದು ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.