Categories: Ripponpete

ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ಪುರುಷನ ಶವ ಕೊಳೆತ ಸ್ಥಿತಿಯಲ್ಲಿಂದು ಪತ್ತೆಯಾಗಿದೆ.

ಮೃತನನ್ನು ಬೆಟ್ಟಿನಕೆರೆ ನಿವಾಸಿ ಜೋಸ್ (68) ಎಂದು ಗುರುತಿಸಲಾಗಿದೆ. ಈತನು ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದು ಪತ್ನಿ ಮತ್ತು ಮಕ್ಕಳು ಹಲವು ವರ್ಷಗಳ ಹಿಂದೆಯೇ ಈತನನ್ನು ಬಿಟ್ಟು ಬೇರೆಡೆಗೆ ವಾಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದ ಈತ ಕಳೆದ ನಾಲ್ಕು ದಿನಗಳ ಹಿಂದೆ ಈತ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈತ ಮನೆಮನೆಗೆ ಹಾಲು ವ್ಯಾಪಾರ ಮಾಡುತ್ತಿದ್ದನು. ನಾಲ್ಕು ದಿನಗಳಿಂದ ಹಾಲು ಕೊಡಲು ಬಾರದ ಹಿನ್ನಲೆಯಲ್ಲಿ ಸ್ಥಳೀಯರು ಇಂದು ಅವರ ಮನೆಗೆ ಹೋಗಿ ನೋಡಿದಾಗ ಮನೆಯ ಒಳಗೆ ಕೊಳೆತ ಸ್ಥಿಯಲ್ಲಿ ಶವ ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಂತ್ಯಕ್ರಿಯೆ ನೆರವೇರಿಸಿದ ಗ್ರಾಮಾಡಳಿತ :

ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಕುಟುಂಬಸ್ಥರಿಗೆ ದೂರವಾಣಿ ಮೂಲಕ ಕರೆಯ ಮಾಹಿತಿ ತಿಳಿಸಲು ಪ್ರಯತ್ನಿಸಿದ್ದಾರೆ. ಆದರೆ ಕುಟುಂಬಸ್ಥರು ಸಮರ್ಪಕವಾಗಿ ಸ್ಪಂದಿಸದೇ ನಮಗೂ ಅವರಿಗೂ ಸಂಬಂಧವಿಲ್ಲವೆಂದು ಕಡ್ಡಿಮುರಿದಂತೆ ತಿಳಿಸಿದ್ದಾರೆ.

ಕೂಡಲೇ ಎಚ್ಚೆತ್ತುಕೊಂಡ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ ಕಾನೂನು ರೀತ್ಯಾ ಕ್ರಮಕೈಗೊಂಡು ಅಂತ್ಯ ಸಂಸ್ಕಾರ ನೆರವೇರಿಸಿದರು.

ಮೃತ ವ್ಯಕ್ತಿಗೆ ಸಂಬಂಧಪಟ್ಟ ಸುಮಾರು ಒಂದೂವರೆ ಲಕ್ಷ ರೂ‌. ಮೌಲ್ಯದ 5 ಗೋವುಗಳನ್ನು ಆನಂದಪುರ ಸಮೀಪದ ಮುರುಘಾ ಮಠದ ಗೋಶಾಲೆಗೆ ಕಳುಹಿಸಿಕೊಡಲಾಯಿತು. ಆತನ ಮನೆ ಹಾಗೂ ಬೈಕ್ ನ್ನು ಗ್ರಾಮ ಪಂಚಾಯತಿ ಸುಪರ್ದಿಗೆ ತೆಗೆದುಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಪಿಡಿಓ ಜಿ ಚಂದ್ರಶೇಖರ್ ಗ್ರಾಪಂ ಸದಸ್ಯರಾದ ಪಿ‌ ರಮೇಶ್, ಆಸೀಫ಼್ ಭಾಷಾ, ರಕ್ಷಣಾ ಇಲಾಖೆಯ ಎಎಸೈ ಮಂಜಪ್ಪ, ಹೆಡ್ ಕಾನ್ಸ್‌ಟೇಬಲ್ ಪರಮೇಶ್ವರಪ್ಪ ಮತ್ತು ಗ್ರಾಪಂ ಸಿಬ್ಬಂದಿಗಳಾದ ನಾಗೇಶ್, ರಾಜೇಶ್ ಇದ್ದರು.

ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಸಹಜ ಸಾವೋ ಅಥವಾ ಕೊಲೆಯೋ ಎಂಬುದು ಪೊಲೀಸ್ ತನಿಖೆಯಿಂದಷ್ಟೆ ತಿಳಿದುಬರಬೇಕಾಗಿದೆ.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

9 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

10 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

10 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

12 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

15 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

16 hours ago