Categories: Ripponpete

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ

ರಿಪ್ಪನ್‌ಪೇಟೆ: ಗೃಹ ಸಚಿವನಾಗಿ ಕ್ಷೇತ್ರದ ರಾಜ್ಯ ಸುತ್ತಿದರೂ ಕೂಡಾ ಕ್ಷೇತ್ರದ ಮತದಾರರ ಮತ್ತು ಕಾರ್ಯಕರ್ತರ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸಿ ಗತ್ತು ಗೈರತ್ತು ಜನರೊಂದಿಗೆ ಬೆರತು ಪ್ರೀತಿ ವಿಶ್ವಾಸದಿಂದಿರುವುದಕ್ಕೆ ಮರು ಆಯ್ಕೆ ಮಾಡಿದ್ದಾರೆಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆದ್ದಾರಿಪುರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಅಭಿನಂದನಾ ಸಭೆಯನ್ನುದ್ದೇಶಿ ಮಾತನಾಡಿ, ಹಾವು ಮುಗುಸಿಯಂತಿದ್ದ ಕಿಮ್ಮನೆ ರತ್ನಾಕರ್ ಮತ್ತು ಮಂಜುನಾಥಗೌಡ ಚುನಾವಣೆಯ ಸಂದರ್ಭದಲ್ಲಿ ಜೋಡೆತ್ತುಗಳಾಗಿ ಒಂದೇ ಹಾರಕ್ಕೆ ಕೊರಳು ಒಡ್ಡಿದರೂ ಕೂಡಾ ಕ್ಷೇತ್ರದ ಮತದಾರರು
ನನ್ನ ಕೈಬಿಡದೆ ಗೆಲಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಅವರ ಋಣವನ್ನು ನಾನು ತೀರಿಸಬೇಕಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಗೆದ್ದಿಲ್ಲ ಗ್ಯಾರಂಟಿ ಕಾರ್ಡ್ ಗೆದ್ದಿದೆ ಎಂದ ಅವರು 60 ವರ್ಷಗಳ ಕಾಲ ಅಧಿಕಾರ ಅನುಭವಿಸಿದ ಕಾಂಗ್ರೆಸ್ ಪಕ್ಷಕ್ಕೆ ಮತದಾರರಲ್ಲಿ ಹೇಳಿಕೊಳ್ಳುವಂತಂಹ ಸಾಧನೆಗಳೇನು ಇರಲ್ಲಿಲ್ಲ
ಗ್ಯಾರಂಟಿ ಕಾರ್ಡ್ ಮೂಲಕ ಮತದಾರರಿಗೆ ಅಸೆ ತೋರಿಸುವ ದುಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದೆ ಎಂದರು.

ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ದೊಡ್ಡಣ್ಣನಂತಿರುವ ಅಮೇರಿಕಾ ಸೇರಿದಂತೆ ಇತರ ರಾಷ್ಟ್ರಗಳು ಹಾಡಿ ಹೊಗುಳು ಮೂಲಕ ಗೌರವ ತೋರಿಸುತ್ತಿದ್ದರೆ ನಮ್ಮ ದೇಶದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಸಂಸದ ರಾಹುಲ್‌ಗಾಂಧಿಯವರು ವಿದೇಶದಲ್ಲಿ ದೇಶದ ಪ್ರದಾನಿಯ ವಿರುದ್ದ ಅವಹೇಳನವಾಗಿ ಹೇಳಿಕೆ ನೀಡುತ್ತಿರುವುದು ಅವರ ಪಕ್ಷದ ಘನತೆ ಗೌರವನ್ನು ಬಿಂಬಿಸುತ್ತದೆಂದು ವಿಷಾದ ವ್ಯಕ್ತಪಡಿಸಿ ನಾಡಿನ ಮತದಾರರಿಗೆ ಈಗಾಗಲೇ ಕಾಂಗ್ರೆಸ್ ಪಕ್ಷದ ನಾಟಕ ಗೊತ್ತಾಗುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಹಲವು ಅಭಿವೃದ್ದಿ ಕಾರ್ಯಗಳಿಗೆ ಹಿಂದಿನ ಸರ್ಕಾರ ಬಿಡುಗಡೆ ಮಾಡಿದಂತಹ ಅನುದಾನವನ್ನು ತಡೆಹಿಡಿದಿರುವುದರಿಂದ ಕ್ಷೇತ್ರದಲ್ಲಿ 200 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾರ್ಯಗಳಿಗೆ ಬಾರಿ ಹಿನ್ನಡೆಯಾಗಿದೆ ಎಂದು ಸಭೆಯಲ್ಲಿ ವಿವರಿಸಿ ಏನೇ ಆದರೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ವಿರೋಧ ಪಕ್ಷದಲ್ಲಿದ್ದರೂ ಕೂಡಾ ಅಭಿವೃದ್ದಿಯೇ ನಮ್ಮ ಮೂಲಧ್ಯೇಯವಾಗಿದ್ದು ಅದನ್ನು ಸಾಧ್ಯವಾದಷ್ಟು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಅಭಿನಂದನಾ ಸಮಾರಂಭದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ನವೀನ್ ಹೆದ್ದೂರು, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಿತ್ರಮ್ಮ, ಉಪಾಧ್ಯಕ್ಷೆ ಲಲಿತಾಪುಂಡಲೀಕ್, ಪಕ್ಷದ ಮುಖಂಡರಾದ ಕಲ್ಲೂರು ನಾಗೇಂದ್ರ, ರಾಮಪ್ಪ, ಕುಮಾರಸ್ವಾಮಿ, ಕೆ.ವಿ.ಲಿಂಗಪ್ಪ ಕಗ್ಗಲಿ, ವಿಶು, ಗಿರೀಶ್ ಜಂಬಳ್ಳಿ ಇನ್ನಿತರರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago