Categories: Ripponpete

ಗವಟೂರು ಶ್ರೀರಾಮೇಶ್ವರ ದೇವಸ್ಥಾನದ 14ನೇ ವರ್ಷದ ವಾರ್ಷಿಕೋತ್ಸವ, 108 ಕುಂಭಾಭಿಷೇಕ

ರಿಪ್ಪನ್‌ಪೇಟೆ : ಸಮೀಪದ ಇತಿಹಾಸ ಪ್ರಸಿದ್ದ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಗುರುವಾರ ಶ್ರೀರಾಮೇಶ್ವರ ದೇವರ ಪ್ರತಿಷ್ಠಾಪನಾ ಹದಿನಾಲ್ಕನೇ ವರ್ಷದ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ವೇ.ಪುಟ್ಟಯ್ಯ ಎಂ ಆಲಳ್ಳಿಮಠ ಮತ್ತು ಪಂಚಾಕ್ಷರಯ್ಯ ಮಲ್ಲಾಪುರ ಇನ್ನಿತರ ಪುರೋಹಿತ ವರ್ಗದವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜಾ ಕಾರ್ಯ ನಡೆದು ಸಂಪನ್ನಗೊಂಡಿತು.


ಶ್ರೀ ರಾಮೇಶ್ವರ ದೇವರಿಗೆ 108 ಕುಂಭಾಭಿಷೇಕ ಮತ್ತು ರುದ್ರಾಭಿಷೇಕ ಆಷ್ಟೋತ್ತರ ಬಿಲ್ವಾರ್ಚನೆ ರುದ್ರಹೋಮ ಪಂಚಾಮೃತ ಅಭಿಷೇಕ ಪರಿವಾರ ದೇವರುಗಳಿಗೆ ಪೂಜೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಂತರ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು.
19 ರಂದು ಬುಧವಾರ ಸಂಜೆ ಶ್ರೀನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ ಪೂಜೆ ಜರಗಿತು.


ಪತಿ ಹಾಲಪ್ಪ ಪರ ಪತ್ನಿಯಿಂದ ದೇವರಿಗೆ ಪೂಜೆಯೊಂದಿಗೆ ಮತಯಾಚನೆ:

ಇತಿಹಾಸ ಪ್ರಸಿದ್ದ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಗುರುವಾರ ಶ್ರೀರಾಮೇಶ್ವರ ದೇವರ ಪ್ರತಿಷ್ಠಾಪನಾ ಹದಿನಾಲ್ಕನೇ ವರ್ಷದ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಪೂಜಾ ಮಹೋತ್ಸವದಲ್ಲಿ ಮಾಜಿ ಸಚಿವ ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ನವರ ಪತ್ನಿ ಇಂದು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಪತಿಯ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿ ನೆರೆದ ಭಕ್ತರಲ್ಲಿ ಮತಯಾಚನೆ ಮಾಡಿದರು.


ಈ ಸಂದರ್ಭದಲ್ಲಿ ರಾಮೇಶ್ವರ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ ಗಣೇಶ್‌ರಾವ್ ಹಳಿಯೂರು, ಜಿ.ಎಂ.ದುಂಡರಾಜಗೌಡ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ, ಗ್ರಾ.ಪಂ. ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಮಹಾಲಕ್ಷ್ಮಿ ಪಕ್ಷದ ಮುಖಂಡರಾದ ವಾಸಶೆಟ್ಟಿ, ಬೇಕರಿ ನಾರಾಯಣ, ಎಂ.ಸುರೇಶ್‌ಸಿಂಗ್, ಕೀರ್ತಿಗೌಡ, ಜಿ.ಡಿ.ಮಲ್ಲಿಕಾರ್ಜುನ, ಅಶ್ವಿನಿ ರವಿಶಂಕರ್ ಇನ್ನಿತರ ಹಲವು ಮುಖಂಡರು ಪಾಲ್ಗೊಂಡಿದ್ದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

6 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

8 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

9 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

14 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

15 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago