Categories: Ripponpete

ಗುಡ್‌ಶಫರ್ಡ್ ಚರ್ಚ್‌ನ ಧರ್ಮಗುರುಗಳ ದರ್ಶನಾಶೀರ್ವಾದ ಪಡೆದ ಬೇಳೂರು

ರಿಪ್ಪನ್‌ಪೇಟೆ: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಸಂಕಷ್ಟಗಳು ಎದುರಾಗದಂತೆ ದೇವಸ್ಥಾನ, ಚರ್ಚ್, ಮಠ ಮಂದಿರ ಹೀಗೆ ತೆರಳಿ ಅಲ್ಲಿನ ದೇವರ ಮತ್ತು ಧರ್ಮಗುರುಗಳ ದರ್ಶನಾಶೀರ್ವಾದ ಪಡೆಯುವುದು ಇತ್ತೀಚಿನ ದಿನಗಳಲ್ಲಿ ಕಾಣಬಹುದಾಗಿದ್ದು ಅದರಂತೆ ಇಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಕ್ರಿಶ್ಚಿಯನ್ ಚರ್ಚ್‌ನ ಧರ್ಮಗುರುಗಳನ್ನು ಭೇಟಿ ಮಾಡಿ ದರ್ಶನಾಶೀರ್ವಾದ ಪಡೆದರು.

ಕ್ರಿಶ್ಚಿಯನ್ ಧರ್ಮಗುರುಗಳು ಆಭ್ಯರ್ಥಿ ಗೋಪಾಲಕೃಷ್ಣರವರಿಗೆ ಶುಭಹಾರೈಸಿ ತಾವು ಜನರ ಸಂಕಷ್ಟವನ್ನು ಪರಿಹರಿಸುವ ಮೂಲಕ ಮತದಾರರಲ್ಲಿ ಪ್ರೀತಿ ವಿಶ್ವಾಸಗಳಿಸಿ ನಿಮಗೆ ಮುಂದೆ ಒಳ್ಳಯ ಭವಿಷ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಸಾಗರ-ಹೊಸನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರು ಉತ್ತಮ ಸ್ಪಂದನೆ ನೀಡುತ್ತಿದ್ದಾರೆ. ಚುನಾವಣೆಯಲ್ಲಿ ನನ್ನದೇ ಗೆಲುವು ಎಂಬ ವಾತಾವರಣ ಸೃಷ್ಟಿಯಾಗಿದೆ
ನಮ್ಮ ಪಕ್ಷದ ಗ್ಯಾರಂಟಿ ಕಾರ್ಡ್‌ಗಳು ಈಗಾಗಲೇ ಮನೆಮನಸ್ಸು ತಲುಪಿ ಈ ಐದು ಪ್ರಣಾಳಿಕೆಗಳು ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಿದ್ದು ಹಣ ಈ ಬಾರಿ ಚಲಾವಣೆಯಾಗದೇ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆಯವರು ಹೇಳಿದಂತೆ ಹಣಪಡೆದು ಮತವನ್ನು ಒಳ್ಳೆಯ ವ್ಯಕ್ತಿಗೆ ಚಲಾಯಿಸಿ ಎಂದಿರುವುದು ನನ್ನ ಗೆಲುವಿಗೆ ಶಕ್ತಿ ಬಂದಂತಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾಲ್ಲೂಕ್ ಪ್ರಚಾರ ಸಮಿತಿ ಅಧ್ಯಕ್ಷ ಜಯಶೀಲಪ್ಪಗೌಡ ಹರತಾಳು, ಎಪಿಎಂಸಿ ಮಾಜಿ ಅಧ್ಯಕ್ಷ ಹಾರೋಹಿತ್ತಲು ಈಶ್ವರಪ್ಪಗೌಡ, ಪಕ್ಷದ ಮುಖಂಡರಾದ ಹಕ್ರೆ ಮಲ್ಲಿಕಾರ್ಜುನ, ಡಿ.ಈ.ಮಧುಸೂದನ್, ಆಸೀಫ್‌ಭಾಷಾಸಾಬ್, ಎನ್.ಚಂದ್ರೇಶ್, ಆರ್.ಹೆಚ್.ಶ್ರೀನಿವಾಸ್, ರವೀಂದ್ರ ಕೆರೆಹಳ್ಳಿ, ಪರಮೇಶ, ಕೌಶಿಕ್, ವರ್ಗೀಸ್, ಉಲ್ಲಾಸ ತೆಂಕೋಲ, ಧನಲಕ್ಷ್ಮಿ, ಇನ್ನಿತರ ಹಲವರು ಹಾಜರಿದ್ದರು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

13 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

14 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

14 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

16 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

18 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

19 hours ago