ರಿಪ್ಪನ್ಪೇಟೆ: ಚಲಿಸುತ್ತಿದ್ದ ಬೈಕ್ಗೆ ನರಿ ಅಡ್ಡ ಬಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ರಿಪ್ಪನ್ಪೇಟೆ ಠಾಣಾ ವ್ಯಾಪ್ತಿಯ ವರನಹೊಂಡದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೂಗುಡ್ತಿ ಕಡೆಯಿಂದ ರಿಪ್ಪನ್ಪೇಟೆ ಮಾರ್ಗವಾಗಿ ಬರುತ್ತಿದ್ದ ಬೈಕ್ಗೆ ನರಿ ಅಡ್ಡ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬಿದ್ದು ತೀವ್ರ ಸ್ವರೋಪದ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕುವೆಂಪು ನಗರದ ನಿವಾಸಿ ಉಪನ್ಯಾಸಕ ಶ್ರೀಧರ (50) ರವರಿಗೆ ತಲೆ ಹಾಗೂ ಮೈಕೈಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಬೈಕ್ ಅಡ್ಡ ಬಂದಿದ್ದ ನರಿಗೆ ತೀವ್ರ ಗಾಯವಾಗಿದ್ದು ಘಟನೆ ನಡೆದ ಸ್ಥಳದಲ್ಲಿಯೇ ಜೀವನ್ಮರಣ ಹೋರಾಟದಲ್ಲಿದ್ದ ನರಿಯನ್ನು ಗಮನಿಸಿದ ಹಲವರು ತಕ್ಷಣ ಅರಸಾಳು-ಹೊಸನಗರ ಆರಣ್ಯ ಇಲಾಖೆಯವರಿಗೆ ತಿಳಿಸಿದ್ದು ವಿಷಯ ತಿಳಿಯುತ್ತಿದ್ದಂತೆ ಹೊಸನಗರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಹಾಗೂ ಅರಸಾಳು ವಲಯ ಅರಣ್ಯಾಧಿಕಾರಿ ಬಾಬು ರಾಜೇಂದ್ರಪ್ರಸಾದ್ ಮತ್ತು ಸಿಬ್ಬಂದಿಗಳಾದ ನದಾಫ್, ಅನಿಲ್ ಮತ್ತು ಅಕ್ಷಯ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಅಪಾಯದ ಸ್ಥಿತಿಯಲ್ಲಿದ್ದ ನರಿಗೆ ಚಿಕಿತ್ಸೆ ನೀಡಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…