Categories: Ripponpete

ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ 108 ಬಗೆಯ ವೈವಿಧ್ಯಮಯ ಸಂಪ್ರದಾಯಕ ಶರ್ಕರ ನೈವೇದ್ಯ ಅರ್ಪಣೆ

ರಿಪ್ಪನ್‌ಪೇಟೆ: ಶ್ರಾವಣ ಶುಕ್ಲ ನವಮಿ ಶುಭ ದಿನದಂದು ಶ್ರೀ ವರಮಹಾಲಕ್ಷ್ಮಿ ಆರಾಧನೆಯಿಂದ ಧನ-ಕನಕ-ಸಂಪತ್ತು ವರ್ಧಿಸಲೆಂಬ ಪ್ರಾರ್ಥನೆ ಸಲ್ಲಿಸಲು ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರು ಆಗಮಿಸಿದ್ದರು.

ಹೊಂಬುಜ ಶ್ರೀ ಜೈನ ಮಠದ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ ಪೂಜೆಯಿಂದ ಸಮೃದ್ಧಿ, ಸುಖ-ಶಾಂತಿ ಪ್ರಾಪ್ತಿಯಾಗಲಿ ಎಂದು ಭಕ್ತರನ್ನು ಹರಸಿದರು.

ಶ್ರಾವಣ ಮಾಸದಲ್ಲಿ ಶ್ರೀ ಪದ್ಮಾವತಿ ದೇವಿ ಆರಾಧಕರೆಲ್ಲರೂ ಭಕ್ತಿ, ಶ್ರದ್ಧೆಯ ಕಾಣಿಕೆಗಳನ್ನು ಸಮರ್ಪಿಸಿ, ಉತ್ತಮ ಬೆಳೆ, ಮಳೆಗಾಗಿ ಪ್ರಾರ್ಥಿಸಿದರು. ಉತ್ತರ ಭಾರತದಿಂದ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಭಕ್ತರು ಉಡಿ ತುಂಬಿ, ಹೂವು ಹಣ್ಣು ಸಮರ್ಪಿಸಿ ಇಷ್ಟಾರ್ಥ ಈಡೇರಲೆಂದು ಪ್ರಾರ್ಥಿಸಿದರು.
ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಅಲಂಕಾರವನ್ನು ಭಕ್ತರು ಕಣ್ತುಂಬಿಕೊಂಡರು. ಅಷ್ಟವಿಧಾರ್ಚನೆ ಪೂಜೆಯ ಬಳಿಕ ಭಕ್ತರು ವಿವಿಧ ಹರಕೆ ಪೂಜೆ ಸಲ್ಲಿಸಿದರು. ಅಭೀಷ್ಠವರಪ್ರಸಾದದಾಯಿನಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ 108 ವೈವಿಧ್ಯಮಯ ಸಾಂಪ್ರದಾಯಕ ಶರ್ಕರ ನೈವೇದ್ಯಗಳನ್ನು ಅರ್ಪಿಸಲಾಯಿತು.
ಸರ್ವಾಲಂಕಾರ ಮಹಾಪೂಜೆಯಲ್ಲಿ ಆಗಮಿಸಿದ ಭಕ್ತರು ಜಿನನಾಮವನ್ನು ಪಠಿಸಿದರು. ಆಗಮಿಸಿದ್ದ ಭಕ್ತಾಧಿಗಳಿಗೆ ಅಭೀಷ್ಠ ಪ್ರಸಾದ ಭವನದಲ್ಲಿ ಸೂಕ್ತ ಊಟೋಪಚಾರ ಮತ್ತು ನೂತನ ಯಾತ್ರಿ ನಿವಾಸದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿತ್ತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago