ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ; ಅನಾಥವಾಗಿಯೇ ಉಳಿದಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ

0 43

ರಿಪ್ಪನ್‌ಪೇಟೆ : ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಮಾಜಿ ಸಚಿವ ಕಾಗೋಡು ತಮ್ಮಪ್ಪನವರ ಕನಸಿನ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಒಂದಾಗಿದ್ದ ಸ್ವಾವಲಂಬಿ ಉದ್ಯೋಗಕ್ಕೆ ಉತ್ತೇಜನ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಕೆರೆಹಳ್ಳಿ ಗ್ರಾಮದ ಗ್ರಾಮ ಠಾಣಾದ 4 ಎಕರೆ ಜಾಗವನ್ನು ಮಂಜೂರು ಮಾಡಿಸುವ ಮೂಲಕ “ಕೈಗಾರಿಕಾ ವಸಾಹತು’’ ಸ್ವಂತ ಸಣ್ಣ ಕೈಗಾರಿಕೆ ನಡೆಸುವವರಿಗೆ ಪ್ರತ್ಯೇಕ ಜಾಗ ಕೊಡುವ ವ್ಯವಸ್ಥೆ ಇದ್ದರೂ ಕೂಡಾ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಪ್ರದೇಶ ಅನಾಥವಾಗಿಯೇ ಉಳಿಯುವಂತಾಗಿದೆ ಎನ್ನಲಾಗಿದೆ.

ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಬಳಿಯಲ್ಲಿರುವ ಪೇಟೆಗೆ ಹೊಂದಿಕೊಂಡಿರುವ ಈ ಜಾಗದಲ್ಲಿ ಕೈಗಾರಿಕೆ ಆರಂಭಿಸಲು ಎಲ್ಲ ಮೂಲಭೂತ ಸೌಲಭ್ಯಗಳಾದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಟ್ಟಡ ನಿವೇಶನದ ವಿನ್ಯಾಸದ ನೀಲ ನಕ್ಷೆಯೊಂದಿಗೆ ಕುಡಿಯುವ ನೀರು ಮತ್ತು ಇತರ ಸೌಲಭ್ಯಗಳನ್ನು ನಿರ್ಮಿಸಲಾಗಿದ್ದರೂ ಕೂಡಾ ಈ ಜಾಗದಲ್ಲಿ ಕೈಗಾರಿಕೆ ಅರಂಭಿಸಲು ಹಿಂದೇಟು ಹಾಕುತ್ತಿರುವ ಮರ್ಮ ತಿಳಿಯದಾಗಿದೆ.

ಕೆ.ಎಸ್.ಎಸ್.ಐ.ಡಿ.ಸಿ.ಜಿಲ್ಲಾ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತದವರ ರಿಪ್ಪನ್‌ಪೇಟೆಯಲ್ಲಿ ಸಣ್ಣ ಕೈಗಾರಿಕೆ ಅರಂಭಿಸಲು ಬೇಕಾದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದರೂ ಕೂಡಾ ಇಲಾಖೆಯ ದುಬಾರಿ ಹಣ ಸಂದಾಯ ಮಾಡಿ ನಿವೇಶನವನ್ನು ಪಡೆಯಲು ಕಷ್ಟಕರವಾಗಿದೆ ಎಂಬ ಹಿನ್ನೆಲೆಯಲ್ಲಿ
ಸ್ವಉದ್ಯೋಗಿಗಳು ನಿವೇಶನ ಮಂಜೂರಾತಿ ಟೆಂಡರ್‌ಗೆ ಅರ್ಜಿ ಸಲ್ಲಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ.

ಒಟ್ಟಾರೆಯಾಗಿ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ಗ್ರಾಮೀಣ ಪ್ರದೇಶದ ಸ್ವಉದ್ಯೋಗಿ ಕೈಗಾರಿಕೋದ್ಯಮಿಗಳು ಸರ್ಕಾರದ ಯೋಜನೆಯಿಂದ ದೂರ ಉಳಿಯುವಂತಾಗಿದೆ ಎಂದು ಹಲವರು ತಮ್ಮ ಅಸಮದಾನವನ್ನು ವ್ಯಕ್ತಪಡಿಸಿದರು.

ಈ ಸುಸಜ್ಜಿತ ಜಾಗದಲ್ಲಿನ ನಿವೇಶನ ವಿನ್ಯಾಸಕ್ಕೆ ರಸ್ತೆ ನೀರು ವಿದ್ಯುತ್ ಸೌಲಭ್ಯವನ್ನು ಕಲ್ಪಿಸಲಾಗಿದ್ದರೂ ಕೂಡಾ ಗಿಡಗಂಟಿ ಬೆಳೆದು ಈ ಜಾಗ ಗೊತ್ತಾಗದಂತಾಗಿದೆ. ಒಟ್ಟಾರೆ ಹೀಗೆ ಮುಂದುವರಿದರೆ ಒಂದಲ್ಲಾ ಒಂದು ದಿನ ಖಾಸಗಿಯವರ ಪಾಲಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

“ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಎಸ್.ಎಸ್.ಐ.ಡಿ.ಸಿ.ಜಿಲ್ಲಾ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತದವರ ರಿಪ್ಪನ್‌ಪೇಟೆಯಲ್ಲಿ ಸಣ್ಣ ಕೈಗಾರಿಕೆ ಅರಂಭಿಸಲು ಬೇಕಾದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದರೂ ಕೆರೆಹಳ್ಳಿಯಲ್ಲಿ ನಿರ್ಮಿಸಲಾಗಿರುವ ಕೈಗಾರಿಕಾ ವಸಾಹತು ಪ್ರದೇಶ ಬಿಳಿ ಆನೆಯಂತಾಗಿದೆ. ಕಾರಣ ಈ ಜಾಗ ಹಾಳು ಕೊಂಪೆಯತ್ತಾಗಿದ್ದು ಅಲ್ಲಿಗೆ ಯಾರು ಹೋಗುತ್ತಾರೆ.”
– ರಾಜೇಶ್ ಕೆ. ಉದ್ಯಮಿ ರಿಪ್ಪನ್‌ಪೇಟೆ

“ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಎಸ್.ಎಸ್.ಐ.ಡಿ.ಸಿ. ಜಿಲ್ಲಾ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತದವರ ರಿಪ್ಪನ್‌ಪೇಟೆಯಲ್ಲಿ ಸಣ್ಣ ಕೈಗಾರಿಕೆ ಆರಂಭಿಸಲು ಬೇಕಾದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿರುವ ಬಗ್ಗೆ ಮಾಹಿತಿ ಇಲ್ಲ.”
– ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಮತ್ತು ಪಿಡಿಓ ಜಿ.ಚಂದ್ರಶೇಖರ್

Leave A Reply

Your email address will not be published.

error: Content is protected !!