Categories: Ripponpete

ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ; ಅನಾಥವಾಗಿಯೇ ಉಳಿದಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ

ರಿಪ್ಪನ್‌ಪೇಟೆ : ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಮಾಜಿ ಸಚಿವ ಕಾಗೋಡು ತಮ್ಮಪ್ಪನವರ ಕನಸಿನ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಒಂದಾಗಿದ್ದ ಸ್ವಾವಲಂಬಿ ಉದ್ಯೋಗಕ್ಕೆ ಉತ್ತೇಜನ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಕೆರೆಹಳ್ಳಿ ಗ್ರಾಮದ ಗ್ರಾಮ ಠಾಣಾದ 4 ಎಕರೆ ಜಾಗವನ್ನು ಮಂಜೂರು ಮಾಡಿಸುವ ಮೂಲಕ “ಕೈಗಾರಿಕಾ ವಸಾಹತು’’ ಸ್ವಂತ ಸಣ್ಣ ಕೈಗಾರಿಕೆ ನಡೆಸುವವರಿಗೆ ಪ್ರತ್ಯೇಕ ಜಾಗ ಕೊಡುವ ವ್ಯವಸ್ಥೆ ಇದ್ದರೂ ಕೂಡಾ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಪ್ರದೇಶ ಅನಾಥವಾಗಿಯೇ ಉಳಿಯುವಂತಾಗಿದೆ ಎನ್ನಲಾಗಿದೆ.

ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಬಳಿಯಲ್ಲಿರುವ ಪೇಟೆಗೆ ಹೊಂದಿಕೊಂಡಿರುವ ಈ ಜಾಗದಲ್ಲಿ ಕೈಗಾರಿಕೆ ಆರಂಭಿಸಲು ಎಲ್ಲ ಮೂಲಭೂತ ಸೌಲಭ್ಯಗಳಾದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಟ್ಟಡ ನಿವೇಶನದ ವಿನ್ಯಾಸದ ನೀಲ ನಕ್ಷೆಯೊಂದಿಗೆ ಕುಡಿಯುವ ನೀರು ಮತ್ತು ಇತರ ಸೌಲಭ್ಯಗಳನ್ನು ನಿರ್ಮಿಸಲಾಗಿದ್ದರೂ ಕೂಡಾ ಈ ಜಾಗದಲ್ಲಿ ಕೈಗಾರಿಕೆ ಅರಂಭಿಸಲು ಹಿಂದೇಟು ಹಾಕುತ್ತಿರುವ ಮರ್ಮ ತಿಳಿಯದಾಗಿದೆ.

ಕೆ.ಎಸ್.ಎಸ್.ಐ.ಡಿ.ಸಿ.ಜಿಲ್ಲಾ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತದವರ ರಿಪ್ಪನ್‌ಪೇಟೆಯಲ್ಲಿ ಸಣ್ಣ ಕೈಗಾರಿಕೆ ಅರಂಭಿಸಲು ಬೇಕಾದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದರೂ ಕೂಡಾ ಇಲಾಖೆಯ ದುಬಾರಿ ಹಣ ಸಂದಾಯ ಮಾಡಿ ನಿವೇಶನವನ್ನು ಪಡೆಯಲು ಕಷ್ಟಕರವಾಗಿದೆ ಎಂಬ ಹಿನ್ನೆಲೆಯಲ್ಲಿ
ಸ್ವಉದ್ಯೋಗಿಗಳು ನಿವೇಶನ ಮಂಜೂರಾತಿ ಟೆಂಡರ್‌ಗೆ ಅರ್ಜಿ ಸಲ್ಲಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ.

ಒಟ್ಟಾರೆಯಾಗಿ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ಗ್ರಾಮೀಣ ಪ್ರದೇಶದ ಸ್ವಉದ್ಯೋಗಿ ಕೈಗಾರಿಕೋದ್ಯಮಿಗಳು ಸರ್ಕಾರದ ಯೋಜನೆಯಿಂದ ದೂರ ಉಳಿಯುವಂತಾಗಿದೆ ಎಂದು ಹಲವರು ತಮ್ಮ ಅಸಮದಾನವನ್ನು ವ್ಯಕ್ತಪಡಿಸಿದರು.

ಈ ಸುಸಜ್ಜಿತ ಜಾಗದಲ್ಲಿನ ನಿವೇಶನ ವಿನ್ಯಾಸಕ್ಕೆ ರಸ್ತೆ ನೀರು ವಿದ್ಯುತ್ ಸೌಲಭ್ಯವನ್ನು ಕಲ್ಪಿಸಲಾಗಿದ್ದರೂ ಕೂಡಾ ಗಿಡಗಂಟಿ ಬೆಳೆದು ಈ ಜಾಗ ಗೊತ್ತಾಗದಂತಾಗಿದೆ. ಒಟ್ಟಾರೆ ಹೀಗೆ ಮುಂದುವರಿದರೆ ಒಂದಲ್ಲಾ ಒಂದು ದಿನ ಖಾಸಗಿಯವರ ಪಾಲಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

“ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಎಸ್.ಎಸ್.ಐ.ಡಿ.ಸಿ.ಜಿಲ್ಲಾ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತದವರ ರಿಪ್ಪನ್‌ಪೇಟೆಯಲ್ಲಿ ಸಣ್ಣ ಕೈಗಾರಿಕೆ ಅರಂಭಿಸಲು ಬೇಕಾದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದರೂ ಕೆರೆಹಳ್ಳಿಯಲ್ಲಿ ನಿರ್ಮಿಸಲಾಗಿರುವ ಕೈಗಾರಿಕಾ ವಸಾಹತು ಪ್ರದೇಶ ಬಿಳಿ ಆನೆಯಂತಾಗಿದೆ. ಕಾರಣ ಈ ಜಾಗ ಹಾಳು ಕೊಂಪೆಯತ್ತಾಗಿದ್ದು ಅಲ್ಲಿಗೆ ಯಾರು ಹೋಗುತ್ತಾರೆ.”
– ರಾಜೇಶ್ ಕೆ. ಉದ್ಯಮಿ ರಿಪ್ಪನ್‌ಪೇಟೆ

“ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಎಸ್.ಎಸ್.ಐ.ಡಿ.ಸಿ. ಜಿಲ್ಲಾ ಸಣ್ಣ ಕೈಗಾರಿಕೆಗಳ ಅಭಿವೃದ್ದಿ ನಿಗಮ ನಿಯಮಿತದವರ ರಿಪ್ಪನ್‌ಪೇಟೆಯಲ್ಲಿ ಸಣ್ಣ ಕೈಗಾರಿಕೆ ಆರಂಭಿಸಲು ಬೇಕಾದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿರುವ ಬಗ್ಗೆ ಮಾಹಿತಿ ಇಲ್ಲ.”
– ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಮತ್ತು ಪಿಡಿಓ ಜಿ.ಚಂದ್ರಶೇಖರ್

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago