ಜು. 31 ರಂದು ರಿಪ್ಪನ್ಪೇಟೆಯಲ್ಲಿ ನೇತ್ರ ತಪಾಸಣೆ ಮತ್ತು ನೇತ್ರದಾನ ಪ್ರತಿಜ್ಞಾ ಶಿಬಿರ
ರಿಪ್ಪನ್ಪೇಟೆ: ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ಮತ್ತು ಯುವರೆಡ್ಕ್ರಾಸ್ ರಾಷ್ಟ್ರೀಯ ಸೇವಾ ಯೋಜನೆ ಐಕ್ಯೂಎಸಿ ಮತ್ತು ಶಿವಮೊಗ್ಗ ಶಂಕರ ಕಣ್ಣಿನ ಅಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 31 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಕಾಲೇಜ್ ಅವರಣದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ನೇತ್ರದಾನ ಪ್ರತಿಜ್ಞಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಟಿ.ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಗೋಪಾಲಕೃಷ್ಣ ಬೇಳೂರು ಶಿಬಿರವನ್ನು ಉದ್ಘಾಟಿಸುವರು. ಪ್ರಾಚಾರ್ಯ ಟಿ.ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಶಿವಮೊಗ್ಗ ಶಂಕರ ಕಣ್ಣಿನ ಅಸ್ಪತ್ರೆಯ ನೇತ್ರ ತಜ್ಞ ಡಾ.ಬೃಂದಾನಾಯ್ಕ್,
ಆರ್.ಎಸ್.ಪ್ರದೀಪ ಹಾಗೂ ಉಪನ್ಯಾಸಕರಾದ ನರೇಂದ್ರ ಕುಳಗಟ್ಟೆ, ಹರ್ಷಕುಮಾರ್, ದೇವರಾಜ್, ಶಿಲ್ಪಾ ಪಾಟೀಲ್ ಇನ್ನಿತರರು ಭಾಗವಹಿಸುವರು.