Categories: Ripponpete

ಜೈನಮುನಿಗಳ ಹತ್ಯೆ ಖಂಡಿಸಿ ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ



ರಿಪ್ಪನ್‌ಪೇಟೆ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ನಡೆಸಿದರು.


ಸಮೀಪದ ಹೊಂಬುಜ ಕ್ಷೇತ್ರದಲ್ಲಿನ ಜೈನ ಮಠದಿಂದ ಮೌನ ಪ್ರತಿಭಟನಾ ಮೆರವಣಿಗೆ ಹೊರಟು ನಾಡಕಛೇರಿಯವರೆಗೆ ಕಾಲ್ನಡಿಗೆಯಲ್ಲಿ ನೂರಾರು ಸಮಾಜ ಬಾಂಧವರೊಂದಿಗೆ ಶ್ರೀಗಳವರು ತೆರಳಿ ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ ಅನಾದಿ ಕಾಲದಿಂದಲೂ ಋಷಿ ಮುನಿಗಳ ಆಶೀರ್ವಾದದಿಂದ ನಾಗರೀಕ ಸಮಾಜ ಸಮೃದ್ಧಿಯಾಗಿ ಸಂಸ್ಕಾರವಂತವಾಗಿ ಬೆಳೆದಿರುವುದು ನಾವು ಇತಿಹಾಸದ ಪುಟಗಳಲ್ಲಿ ನೋಡುತ್ತೇವೆ. ಇಂತಹ ಇತಿಹಾಸ ಪ್ರಸಿದ್ಧ, ಸಂಸ್ಕಾರವಂತ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಕೆಲಸ ಕಾರ್ಯಗಳು ನಡೆಯುತ್ತಿರುವುದು ದುಃಖಕರ ಸಂಗತಿ. ಯಾವುದೇ ಒಂದು ಧರ್ಮದ ಅನುಯಾಯಿಗಳಿರಬಹುದು ಅನ್ಯತಾವಾಗಿ ಯಾರಿಗೂ ಹಿಂಸೆ ಮಾಡಬಾರದು ಎನ್ನುವುದು ನಮ್ಮ ಭಾರತದ ಧರ್ಮದ ತಿರುಳಾಗಿದೆ. ಸಾಮಾನ್ಯ ಜನರಲ್ಲಿ ಈ ರೀತಿಯ ಕೊಲೆಯಾಗುತ್ತಿರುವ ಘಟನೆಯನ್ನು ನಾವು ನೋಡುತ್ತಿದ್ದೆವು. ಆದರೆ ಕೆಲವು ವರ್ಷಗಳಲ್ಲಿ ಸಾಧು ಸಂತರಿಗೆ ಹಲ್ಲೇ ಮಾಡುತ್ತಿರುವುದು ಇಡಿ ನಮ್ಮ ದೇಶಕ್ಕೆ ತಲೆತಗ್ಗಿಸುವ ವಿಚಾರ.

ಇತ್ತೀಚಿನ ನಾಲ್ಕೈದು ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಹೀರೇಕೋಡಿ ಗ್ರಾಮದಲ್ಲಿ ದಿಗಂಬರ ಆಚಾರ್ಯ ಮುನಿಶ್ರೀಗಳವರನ್ನು ಅಮಾನುಷವಾಗಿ ಕೊಲೆಮಾಡಿದ ಘಟನೆ ನಮ್ಮ ಸಮಾಜಕ್ಕೆ ತಲೆತಗ್ಗಿಸುವ ವಿಷಯವಾಗಿದೆ. ಈ ದೇಶದಲ್ಲಿ ಕಾನೂನಿಗೆ ಭಯವಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ನಾವು ಇಂದು ಭಾರತ ಸರ್ಕಾರ ಕರ್ನಾಟರ ರಾಜ್ಯ ಸರ್ಕಾರ ಎಲ್ಲ ಕಾನೂನಿಗೆ ಸಂಬಂಧಪಟ್ಟವರಿಗೆ ನಿವೇದಿಸಿಕೊಳ್ಳುವುದೇನೆಂದರೆ ಎಲ್ಲಾ ಸಮಾಜದವರಿಗೆ ಭಯದ ವಾತಾವರಣ ಇದೆ. ಒಬ್ಬ ಸಾಧು ಸಂತರನ್ನೇ ಈ ರೀತಿಯಾಗಿ ಮಾಡಿದ್ದಾರೆಂದರೆ ಸಾಮಾನ್ಯ ಜನರ ಯಾವ ರೀತಿ ನಾಳೆ ತೊಂದರೆಯಾಗಬಹುದು ಈ ಘಟನೆಯಿಂದ ನಮಗೆಲ್ಲ ತಿಳಿದಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರದವರು ಈಗಾಗಲೇ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದು ಒಳ್ಳೆಯ ರೀತಿಯ ಕಾನೂನು ಜಾರಿಗೆ ಬರಬೇಕು. ಇಂತಹ ಕೃತ್ಯಗಳು ಇನ್ನು ಮುಂದೆ ನಡೆಯಬಾರದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.


ಹೊಂಬುಜದ ದಿಗಂಬರ ಜೈನ ಸಮಾಜದವರು, ಸಾರ್ವಜನಿಕರು ಹಾಗೂ ಜಯಕರ್ನಾಟಕ ವೇದಿಕೆಯ ಕಾರ್ಯಕರ್ತರು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago