ರಿಪ್ಪನ್ಪೇಟೆ: ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಆಧಿಕಾರಕ್ಕೆ ತರುವಲ್ಲಿ ಕಠಿಣ ಶ್ರಮ ವಹಿಸಿದ ಡಿ.ಕೆ.ಶಿವಕುಮಾರ್ ಮತ್ತು ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನೊಂದಿಗೆ ಸಹಕರಿಸಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಪಕ್ಷದ ಕಾರ್ಯಾಲಯದಲ್ಲಿ ಕೃತಜ್ಞತಾ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಜನ್ಮದಿನಾಚರಣೆಯೊಂದಿಗೆ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ ಕಾಂಗ್ರೆಸ್ ಗುರಿಯಾಗಿದೆ ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹಲವು ಜನಹಿತ ಪ್ರಣಾಳಿಕೆಯನ್ನು ಘೋಷಿಸುವ ಮೂಲಕ ನಿರೀಕ್ಷೆಗೂ ಮೀರಿದ ಸ್ಪಷ್ಟ ಬಹುಮತದೊಂದಿಗೆ ಪಕ್ಷವನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದು ನಮ್ಮ ಕಾರ್ಯಕರ್ತರು ಮತ್ತು ಮತದಾರರು ಹಗಲಿರುಳು ಶ್ರಮಿಸಿದ್ದರ ಪ್ರತಿಫಲವೇ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣವಾಗಿದೆ, ಇನ್ನೂ ಮುಂದೆ ಮೈಮರೆಯದೆ ಪಕ್ಷದ ಸಂಘಟನೆಯೊಂದಿಗೆ ಮತದಾರರ ಪ್ರೀತಿ ವಿಶ್ವಾಸವನ್ನು ಬೆಳಸಿಕೊಂಡು ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ತಲುಪಿಸುವ ನಿಟ್ಟಿನಲ್ಲಿ ಸಹಕಾರಿಯಾಗುವಂತೆ ಜಿ.ಪಂ.ಮಾಜಿ ಸದಸ್ಯ ಬಂಡಿ ರಾಮಚಂದ್ರ ಕಾರ್ಯಕರ್ತರಿಗೆ ಹುರಿದುಂಬಿಸಿ ಅಭಿನಂದಿಸಿದರು.
ಕಾಂಗ್ರೆಸ್ ಘಟಕದ ಅಧ್ಯಕ್ಷ ಆಸಿಫ್ಭಾಷಾ ಮಾತನಾಡಿ, ಕಾಗೋಡು ತಿಮ್ಮಪ್ಪನವರ ಸೋಲನ್ನು ಈ ಚುನಾವಣೆಯಲ್ಲಿ ಬೇಳೂರು ಗೋಪಾಲಕೃಷ್ಣರನ್ನು ಗೆಲ್ಲಿಸಿಕೊಳ್ಳುವ ಮೂಲಕ ತೀರಿಸಿಕೊಂಡಿದ್ದು ರಿಪ್ಪನ್ಪೇಟೆಯಲ್ಲಿನ ಹಲವು ಮೂಲಭೂತ ಸಮಸ್ಯೆಗಳಾದ ನಾಲ್ಕು ರಸ್ತೆಗಳನ್ನು ಡಬಲ್ ರಸ್ತೆ ಮಾಡುವ ಮೂಲಕ ಡಿವೈಡರ್ ಅಳವಡಿಕೆ ಮತ್ತು ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಕಟ್ಟಡ ಹಾಗೂ ಬಸ್ ನಿಲ್ದಾಣದ ಬಗ್ಗೆ ಪ್ರಥಮ ಆಧ್ಯತೆ ನೀಡುವುದು ಮತ್ತು ಬೇಳೂರು ಗೋಪಾಲಕೃಷ್ಣರಿಗೆ ಮಂತ್ರಿ ಸ್ಥಾನ ಕಲ್ಪಿಸುವಂತೆ ಸಹ ಈ ಸಭೆಯಲ್ಲಿ ಒಕ್ಕೊರಲ ನಿರ್ಧಾರವನ್ನು ಕಾಂಗ್ರೆಸ್ ಮುಖಂಡರಿಗೆ ಮನವಿ ಮೂಲಕ ಆಗ್ರಹಿಸಿದರು.
ಈ ಅಭಿನಂದನಾ ಕೃತಜ್ಞತಾ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡ ಅಮೀರ್ಹಂಜಾ, ಎಂ.ಎಂ.ಪರಮೇಶ್, ಡಿ.ಈ.ಮಧುಸೂಧನ್, ರವೀಂದ್ರ ಕೆರೆಹಳ್ಳಿ, ರಮೆಶ್, ಉಲ್ಲಾಸ ತೆಂಕೋಲ, ಗಣಪತಿ ಗವಟೂರು, ಆರ್.ಎಸ್.ಶಂಶುದ್ದೀನ್, ಧನಲಕ್ಷ್ಮಿ, ಶ್ರೀಧರ, ಉಮೇಶ್, ನಾಗೇಂದ್ರ, ಮಂಜುನಾಥ ಮಳವಳ್ಳಿ, ನವೀನ್ ಕೆರೆಹಳ್ಳಿ ಮತ್ತಿತರರು ಇದ್ದರು.
ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…
ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.