ರಿಪ್ಪನ್ಪೇಟೆ : ನವರಾತ್ರಿಯ 7ನೇ ಸುದಿನದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಂಪರಾನುಗತ ಬಳೆಗಳಿಂದ ಅಲಂಕರಿಸಿದ ಅಭೀಷ್ಠವರ ಪ್ರದಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿಯವರಿಗೆ ಆಗಮೋಕ್ತ ಶಾಸ್ತ್ರದನ್ವಯ ಪೂಜಾ ವಿಧಾನಗಳನ್ನು ನೆರವೇರಿಸಲಾಯಿತು.
ಅಷ್ಟವಿಧಾರ್ಚನೆ ಪೂಜೆಯ ಬಳಿಕ ಫಲ-ಪುಷ್ಪಗಳನ್ನು ಸಮರ್ಪಿಸಿ ಭಕ್ತವೃಂದದವರು ಜಿನನಾಮ ಸ್ತೋತ್ರಗಳನ್ನು ಪಠಿಸಿದರು.
ಹೊಂಬುಜದ ಪರಮಪೂಜ್ಯ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ದಿವ್ಯ ನೇತೃತ್ವ, ಉಪಸ್ಥಿತಿಯಲ್ಲಿ ಪೂಜಾ ವಿಧಿ-ವಿಧಾನಗಳು ನೆರವೇರಿದವು. ಸುರಕ್ಷಾ ಕವಚದಂತೆ ಧರಿಸುವ ಬಳೆಗಳು ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಯರಿಗೆ ಕೇವಲ ಅಲಂಕಾರ ವಸ್ತುವಾಗಿರದೇ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುವಂತೆ ಮಾಡುತ್ತದೆ ಎಂದು ಶುಭಾಶೀರ್ವಚನ ಪ್ರವಚನದಲ್ಲಿ ಪೂಜ್ಯ ಸ್ವಸ್ತಿಶ್ರೀಗಳವರು ನೈತಿಕ ಮೌಲ್ಯಗಳು ಬಳೆಗಳಂತೆ ಪ್ರತಿಯೋರ್ವರಿಗೂ ಧರ್ಮಪಥವು ಸುಕೃತ ಫಲ ನೀಡುವಂತೆ ಚೈತನ್ಯದಾಯಕವಾಗಿದೆ ಎನ್ನುತ್ತಾ ಹರಸಿದರು.
ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಕ್ಷೇತ್ರಪಾಲ ಸ್ವಾಮಿ ಸನ್ನಿಧಿಯಲ್ಲಿ ಪೂರ್ವ ಪದ್ಧತಿಯಂತೆ ಧಾರ್ಮಿಕ ವಿಧಾನಗಳು ನೆರವೇರಿದವು.
ರಾತ್ರಿ ಅಷ್ಟಾವಧಾನ ಸಹಿತ ನವರಾತ್ರಿ ಪೂಜೆ, ಸಂಗೀತ ಕಾರ್ಯಕ್ರದಲ್ಲಿ ಹೆಚ್ಚಿನ ಭಕ್ತರು ಪಾಲ್ಗೊಂಡಿದ್ದರು. ಸೇವಾಕರ್ತೃರಾದ ಬೆಂಗಳೂರಿನ ಚೂಡಾಮಣಿ ಶ್ರೀ ರವಿರಾಜ್ ಜೈನ್ರವರನ್ನು ಶ್ರೀಗಳವರು ಹರಸಿದರು. ಪುರೋಹಿತ ಪದ್ಮರಾಜ ಇಂದ್ರರವರು ಪೂಜಾ ವಿಧಿ ನೆರವೇರಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…