ರಿಪ್ಪನ್ಪೇಟೆ : ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗಲಿರುವ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಹಾಗೂ 06 ಲಕ್ಷ ರೂ. ವೆಚ್ಚದ ವ್ಯಾಯಾಮ ಶಾಲೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ನಂತರ ಮಾತನಾಡಿದ ಗ್ರಾಪಂ ಸದಸ್ಯ ರಾಘವೇಂದ್ರ ತೋಟದಕಟ್ಟು, ಶಿಕ್ಷಣ ಮತ್ತು ಆರೋಗ್ಯ ನಾಣ್ಯದ ಎರಡು ಮುಖಗಳು. ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಅತ್ಯವಶ್ಯ. ಸಣ್ಣ-ಪುಟ್ಟ ಖಾಯಿಲೆಗಳಿಗೆ ತಾಲೂಕಾ ಆಸ್ಪತ್ರೆಯನ್ನು ಅವಲಂಭಿಸಬಾರದು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆಗೆ ನಮ್ಮ ಸರ್ಕಾರ ಶ್ರಮಿಸಬೇಕಾಗಿದೆ ಎಂದರು.
ನಾಗರಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರ ಮತ್ತು ವ್ಯಾಯಾಮ ಶಾಲೆ ಗ್ರಾಮದ ಜನ ಹಲವು ದಿನಗಳ ಕನಸಾಗಿತ್ತು ಈ ಹಿಂದೆ ಅನೇಕ ಬಾರಿ ಅನುದಾನ ಬಂದರೂ ಜಾಗದ ಸಮಸ್ಯೆಯಿಂದ ಲಕ್ಷಾಂತರ ರೂ ಹಣ ವಾಪಾಸು ಹೋಗುತಿತ್ತು ಆದರೆ ಈ ಬಾರಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಕಾಮಗಾರಿ ಪ್ರಾರಂಭವಾಗಿರುವುದು ಸಂತಸದ ವಿಚಾರವಾಗಿದೆ ಎಂದರು.
ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ಸರೋಜ ನವೀನ್, ಶ್ರೀಧರ್, ಸುಮಂಗಳ ದೇವರಾಜ್, ಯಶಸ್ಪತಿ ವೃಷಭರಾಜ್ ಜೈನ್, ಪಿಡಿಓ ರಮೇಶ್, ಸತೀಶ್ ರಾವ್, ಕೇಶವ್ ಮೂರ್ತಿ, ಸುರೇಶ್ ಆರೋಗ್ಯ ಇಲಾಖೆಯ ಪವಿತ್ರಾ ಹಾಗೂ ಇನ್ನಿತರರಿದ್ದರು.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…