Categories: Ripponpete

‘ಪುಸ್ತಕ ಜೋಳಗೆ’ ಕಾರ್ಯಕ್ರಮದಡಿ ಹಳೆಯ ಪುಸ್ತಕಗಳನ್ನ ಹಿಂಡ್ಲೆಮನೆ ಷಣ್ಮುಖಪ್ಪನವರಿಂದ ಕೋಡೂರು ಡಿಜಿಟಲ್ ಗ್ರಂಥಾಲಯಕ್ಕೆ ದಾನ

ರಿಪ್ಪನ್‌ಪೇಟೆ : ಪುಸ್ತಕ ಜೋಳಗೆ ಕಾರ್ಯಕ್ರಮದಡಿ ಸುಮಾರು 60 ಕ್ಕೂ ಹೆಚ್ಚು ಹಳೆಯ ಪುಸ್ತಕಗಳನ್ನ ಕರಿಗೆರಸು ಗ್ರಾಮದ ಹಿಂಡ್ಲೆಮನೆ ಕೆ. ಷಣ್ಮುಖಪ್ಪನವರು ಕೋಡೂರು ಡಿಜಿಟಲ್ ಗ್ರಂಥಾಲಯಕ್ಕೆ ದಾನ ರೂಪದಲ್ಲಿ ಕೊಡಲಾಯಿತು.

ಮಂಗಳವಾರ ಕೊಡೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಷಣ್ಮುಖಪ್ಪನವರ ಮನೆಗೆ ತೆರಳಿ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯಕ್ಕೆ ಪುಸ್ತಕ ಜೋಳಗೆ ಕಾರ್ಯಕ್ರಮದಡಿ ಹಳೆಯ ಪುಸ್ತಕಗಳನ್ನ ದಾನ ರೂಪದಲ್ಲಿ ಪಡೆದರು‌.
ಈ ಸಂದರ್ಭದಲ್ಲಿ ಷಣ್ಮುಖಪ್ಪನವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಸುಮಾರು 89 ವರ್ಷ ಪ್ರಾಯದ ಇವರು ಕುಣಬಿ ಜನಾಂಗದ ಬಗ್ಗೆ ‘ಮರಾಟಿ ಕುಣಬಿಗಳು ಬುಡಕಟ್ಟು ಅಧ್ಯಯನ’ ಎಂಬ ಕಿರು ಹೊತ್ತಿಗೆಯನ್ನು ರಚನೆ ಮಾಡಿದ್ದು ಈ ವಿಚಾರವಾಗಿ ತೀರ್ಥಹಳ್ಳಿ ಪ್ರಾಧ್ಯಾಪಕ ಡಾ. ಜೆ.ಕೆ ರಮೇಶ್ ಇವರು ಷಣ್ಮುಖಪ್ಪರವರ ಅನುಭವಗಳನ್ನು ಪುಸ್ತಕ ರೂಪದಲ್ಲಿ ದಾಖಲಿಸಿ ಬಿಡುಗಡೆ ಮಾಡಿರುತ್ತಾರೆ.

ಇನ್ನೂ ವಿಶೇಷವೆಂದರೆ ಕಡು ಬಡತನದಲ್ಲಿ ಹುಟ್ಟಿದ ಇವರು ಬಾಲ್ಯದಲ್ಲಿ ಶಾಲೆಯ ಮೆಟ್ಟಿಲನ್ನೆ ಹತ್ತದ ಇವರು ಮರಳು ಮತ್ತು ಮರದ ಎಲೆಗಳ ಮೇಲೆ ಅಕ್ಷರ ಅಭ್ಯಾಸ ಮಾಡಿ ವಿದ್ಯೆ ಕಲಿತಿದ್ದಾರೆ. ಇವರು ಶಾಲೆಗೆ ಹೋಗಿರುವ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಆಂಗ್ಲ ಭಾಷೆಯನ್ನು ಸಹ ಓದಲು ಹಾಗೂ ಬರೆಯಲು ಬಲ್ಲವರಾಗಿದ್ದಾರೆ. ಕುಶಲ ಕರ್ಮಿಗಳು ಆದ ಇವರು ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಇವರು ಸಂಗ್ರಹಿಸಿರು‌ವ ಪುಸ್ತಕಗಳನ್ನು ಹಾಳು ಮಾಡದೆ ಇನ್ನೊಬ್ಬರಿಗೆ ದಾರಿ ದೀಪವಾಗಲಿ ಎಂದು ಗ್ರಂಥಾಲಯಕ್ಕೆ ದಾನ ನೀಡಿರುತ್ತಾರೆ.


ಈ ದಾನಿಗಳಿಗೆ ಗ್ರಾಮ ಪಂಚಾಯಿತಿಯಿಂದ ಹೃತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸಿ ಪುಸ್ತಕ ಜೋಳಗೆ ಕಾರ್ಯಕ್ರಮದಡಿ ಪುಸ್ತಕಗಳನ್ನ ದಾನವಾಗಿ ಪಡೆದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

12 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

15 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

15 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

16 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

17 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

19 hours ago