ರಿಪ್ಪನ್ಪೇಟೆ: 25 ರಿಂದ 30 ವರ್ಷ ಮೇಲ್ಪಡುವ ಪ್ರತಿಯೊಬ್ಬರು ಪ್ರತಿ ಆರು ತಿಂಗಳು ಅಥವಾ ಒಂದು ವರ್ಷಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯದಲ್ಲಿನ ವ್ಯತ್ಯಾಸವನ್ನು ಪತ್ತೆ ಹಚ್ಚಿ ಸಕಾಲದಲ್ಲಿ ಚಿಕಿತ್ಸೆ ಪಡೆಯುವುದರೊಂದಿಗೆ ಆರಂಭದಲ್ಲಿಯೇ ರೋಗವನ್ನು ಗುಣಪಡಿಸಿಕೊಳ್ಳಲು ಸಾಧ್ಯವೆಂದು ಶಿವಮೊಗ್ಗ ಆರೈಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಫಿಜಿಶಿಯನ್ ಡಾ.ಆಶಿತಾ ಹೇಳಿದರು.
ರಿಪ್ಪನ್ಪೇಟೆಯ ಸರ್ಕಾರಿ ಪ್ರಾಥಮಿಕ ಶಾಲಾ ಅವರಣಧಲ್ಲಿ ಶಿವಮೊಗ್ಗ ಆರೈಕೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಗ್ರಾಮ ಪಂಚಾಯ್ತಿ ರಿಪ್ಪನ್ಪೇಟೆ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಣ ಹೆಲ್ತ್ಕೇರ್ (ಡಾ.ಕಿರಣ್ಶಾಸ್ತ್ರಿ ಎಂ.ಬಿ.ಬಿ.ಎಸ್) ಇವರ ಮೊದಲನೇ ವರ್ಷದ ಅಂಗವಾಗಿ ಆಯೋಜಿಸಲಾದ “ಉಚಿತ ಆರೋಗ್ಯ ತಪಾಸಣಾ ಶಿಬಿರ’’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಕ್ಕಳಲ್ಲಿ ಕಾಣುವ ಹಲವು ಸ್ತ್ರೀ ಸಮಸ್ಯೆಗಳ ಕುರಿತು ಜಾಗೃತಿ ವಹಿಸಲು ಇಂತಹ ಶಿಬಿರಗಳು ಸಹಕಾರಿಯಾಗಿವೆ ಎಂದರು.
ಇನ್ನೋರ್ವ ಸ್ತ್ರೀ ರೋಗ ತಜ್ಞರಾದ ಡಾ.ಲಕ್ಷ್ಮಿ ಮಾತನಾಡಿ, ಇಂದಿನ ದುಬಾರಿ ವೆಚ್ಚದಲ್ಲಿ ಗ್ರಾಮೀಣ ಪ್ರದೇಶದ ರೈತ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಚಿಕಿತ್ಸೆ ಪಡೆಯಲು ದೊಡ್ಡ ನಗರಗಳಲ್ಲಿನ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬಂದು ತಪಾಸಣೆ ಮಾಡಿಸಿಕೊಳ್ಳಲು ಕಷ್ಟಕರವಾಗಿರುವಾಗ ಗ್ರಾಮೀಣ ಭಾಗದಲ್ಲಿನ ತಮ್ಮೂರಿನಲ್ಲಿಯೇ ಇಂತಹ ಉಚಿತ ಶಿಬಿರಗಳನ್ನು ಏರ್ಪಡಿಸಿ ರೋಗದ ಬಗ್ಗೆ ತಿಳಿದುಕೊಂಡು ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶವಾಗುವುದೆಂದು ಹೇಳಿದರು.
ಈ ಶಿಬಿರದಲ್ಲಿ ತಜ್ಞ ವೈದ್ಯಾಧಿಕಾರಿಗಳಾದ ಚರ್ಮರೋಗ ತಜ್ಞ ಡಾ.ಆಶಾ, ದಂತ ವೈದ್ಯರಾದ ಡಾ.ಅನಿತಾ, ಕೀಲು ಮತ್ತು ಮೋಳೆ ತಜ್ಞರಾದ ಡಾ.ವಿನಯ್, ಫ್ಯಾಮಿಲಿ ಫಿಜಿಶಿಯನ್ ಡಾ. ಕಿರಣ್ಶಾಸ್ತ್ರಿ ಹಾಗೂ ಡಾ.ಸುರೇಶ್ ಶಿಬಿರದಲ್ಲಿ ಪಾಲ್ಗೊಂಡು 400 ಕ್ಕೂ ಅಧಿಕ ಜನರಿಗೆ ತಪಾಸಣೆ ನಡೆಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…