Categories: Ripponpete

‘ಪ್ರೋ. ಶುಭಚಂದ್ರ’ ಮೈಸೂರುಇವರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ರಿಪ್ಪನ್‌ಪೇಟೆ: ಜೈನ ಮಠದ ವತಿಯಿಂದ ನೀಡುವ 2023ನೇ ಸಾಲಿನ ಸಿದ್ಧಾಂತಕೀರ್ತಿ ಪ್ರಶಸ್ತಿಯನ್ನು ಸಾಹಿತಿಗಳು, ಸಂಶೋಧಕರು, ಬೋಧಕರಾದ ಪ್ರೋ. ಶುಭಚಂದ್ರ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ.


ಈ ಪ್ರಶಸ್ತಿಯನ್ನು ವಾರ್ಷಿಕ ಮಹಾರಥಯಾತ್ರಾ ಮಹೋತ್ಸವದ ಮುನ್ನಾ ದಿನವಾದ 14-03-2023ನೇ ಮಂಗಳವಾರ ನಡೆಯುವ ಧಾರ್ಮಿಕ ಸಭೆಯಲ್ಲಿ ನೀಡಲಾಗುವುದು. ಇವರು ಜೈನಾಗಮಗಳ ಅನುವಾದ, ಗ್ರಂಥರಚನೆ, ಗ್ರಂಥ ಸಂಪಾದನೆ, ಉಪನ್ಯಾಸ ಇನ್ನಿತರ ಕಾರ್ಯಗಳಲ್ಲಿ ವಿಶೇಷ ಅನುಭವ ಹೊಂದಿರುತ್ತಾರೆ.


ಇವರು ಮೈಸೂರು ವಿ.ವಿ. ಜೈನಶಾಸ್ತ್ರ ಮತ್ತು ಪ್ರಾಕೃತ ವಿಭಾಗದಲ್ಲಿ ವಿದ್ಯಾರ್ಥಿಯಾಗಿ, ಸಂಶೋಧಕರಾಗಿ ಬೋಧಕರಾಗಿ ಸೇವೆ ಸಲ್ಲಿಸಿರುತ್ತಾರೆ. 2006ರಲ್ಲಿ ನಿವೃತ್ತರಾಗಿ ಪ್ರಸ್ತುತ ಮೈಸೂರಿನಲ್ಲಿ ವಾಸವಾಗಿದ್ದಾರೆ. ಜೈನ ಸಾಹಿತ್ಯ ಮತ್ತು ಸಂಸ್ಕೃತಿ, ಪ್ರಾಕೃತ ಸಾಹಿತ್ಯ ಕೈಪಿಡಿ, ಅಹಿಂಸೆ, ಯಶೋಧರ ಚರಿತೆ ಇವು ಇವರ ಪ್ರಮುಖ ಕೃತಿಗಳಾಗಿವೆ. ಇದಲ್ಲದೇ ಹಲವಾರು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.
ಇವರು ಭಾರತದ ಉದ್ದಗಲಕ್ಕೂ ಅನೇಕ ವಿಶ್ವವಿದ್ಯಾಲಯಗಳಲ್ಲಿ ನಡೆದ ರಾಷ್ಟ್ರೀಯ, ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಮತ್ತು ಸಮ್ಮೇಳನಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಧ್ಯಾನ-ಶಿಬಿರಗಳನ್ನು ನಡೆಸಿ ಜನಪ್ರೀಯರಾಗಿದ್ದಾರೆ.


ಇವರಿಗೆ ಗೊಮಟೇಶ್ವರ ವಿದ್ಯಾಪೀಠ ಪುರಸ್ಕಾರ, ವಿಶ್ವಮೈತ್ರಿ ಸೇವಾ ಪುರಸ್ಕಾರ, ಜಂಬೂದ್ವೀಪ ಪುರಸ್ಕಾರ, ಸೋದೆ ಸದಾಶಿವರಾಯ ಹಲವಾರು ಪ್ರಶಸ್ತಿಗಳು ಲಭಿಸಿವೆ. ಅನೇಕ ಸಂಘ-ಸಂಸ್ಥೆಗಳು ಇವರನ್ನು ಸನ್ಮಾನಿಸಿ ಗೌರವಿಸಿವೆ.
ಹೊಂಬುಜ ಜೈನ ಮಠದಿಂದ ನೀಡುವ ಸಿದ್ದಾಂತಕೀರ್ತಿ ಪ್ರಶಸ್ತಿಯು ರೂ. 51,000 ಗಳ ನಗದು ಮತ್ತು ಅಂಗವಸ್ತ್ರ ಸಹಿತ ನೀಡಿ ಗೌರವಿಸಲಾಗುವುದು. ಇದುವರೆಗೂ ಅನೇಕ ವಿದ್ವಾಂಸರಿಗೆ ಈ ಪ್ರಶಸ್ತಿಯನ್ನು ಸುಮಾರು 5 ದಶಕಗಳಿಂದ ಶ್ರೀಮಠದಿಂದ ನೀಡಲಾಗುತ್ತಿದೆ.

Malnad Times

Recent Posts

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

6 hours ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 hours ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 day ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

1 day ago