Categories: Ripponpete

ಬಂದೂಕು ಪರವಾನಗಿ ನವೀಕರಣದ ಹೆಸರಿನಲ್ಲಿ ಸರ್ಕಾರದಿಂದ ರೈತರ ಸುಲಿಗೆ ; ಆಕ್ರೋಶ

ರಿಪ್ಪನ್‌ಪೇಟೆ : ಮಂಗನಿಗೆ ಸೊಪ್ಪು ಹುಟ್ಟದ ಕಾಲದಲ್ಲಿ ಸರ್ಕಾರ ರೈತರು ಫಸಲು ಮತ್ತು ಆತ್ಮ ರಕ್ಷಣೆಗಾಗಿ ಪಡೆಯಲಾದ ಬಂದೂಕುಗಳ ಪರವಾನಗಿ ನವೀಕರಣ ಮತ್ತು ಚುನಾವಣೆಯಿಂದಾಗಿ ಠಾಣೆಗೆ ಒಪ್ಪಿಸುವ ಸರ್ಕಾರದ ನಿರ್ಧಾರದಿಂದ ರೈತರು ದಿಕ್ಕೆಟ್ಟು ಕುಳಿತುಕೊಳ್ಳುವಂತಾಗಿದೆ. ಬೆಕ್ಕಿಗೆ ಆಟ ಇಲಿಗೆ ಪ್ರಾಣ ಸಂಕಟ ಎನ್ನುವಂತಾಗಿದೆ ಎಂದು ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.


ಬಂದೂಕುಗಳ ಪರವಾನಗಿ ನವೀಕರಿಸಿಕೊಳ್ಳಲು ಕಂದಾಯ ಇಲಾಖೆಗೆ ಮತ್ತು ಪೊಲೀಸ್ ಇಲಾಖೆಗೆ ಒಟ್ಟು 4.500 ರೂ. ಹಣ ಕಟ್ಟಬೇಕು ಇನ್ನೂ ಈಗ ಪ್ರಾಣಿ, ಪಕ್ಷಿಗಳಿಗೆ ಕುಡಿಯಲು ನೀರು ಮತ್ತು ಆಹಾರಕ್ಕಾಗಿ ರೈತರ ತೋಟ ಗದ್ದೆಗಳಿಗೆ ನುಗ್ಗಿ ಬೇಸಿಗೆ ಬೆಳೆ ಹಾನಿಗೊಳಿಸುವುದನ್ನು ತಡೆಯಲು ರೈತರು ತಮ್ಮ ಬಂದೂಕಿನಿಂದ ಗುಂಡು ಹಾರಿಸಿ ಪ್ರಾಣಿಗಳನ್ನು ಓಡಿಸಲು ಇರುವ ಏಕೈಕ ಸಾಧನವನ್ನು ಚುನಾವಣೆಯ ದೃಷ್ಟಿಯಿಂದ ಠಾಣೆಗೆ ಒಪ್ಪಿಸಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಫಸಲನ್ನು ರಕ್ಷಿಸಿಕೊಳ್ಳುವುದು ಹರಸಾಹಸವಾಗಿದೆ ಎಂದು ರೈತರು ತಮ್ಮ ಅಸಹಾಯಕತೆಯನ್ನು ಮಾಧ್ಯಮದವರ ಬಳಿ ತೋಡಿಕೊಂಡರು.

ಸರ್ಕಾರ ಬಂದೂಕು ಪರವಾನಗಿ ನವೀಕರಣದ ಹೆಸರಿನಲ್ಲಿ ಕಂದಾಯ ಇಲಾಖೆ ಮತ್ತು ಪೊಲೀಸ್ ಠಾಣೆಯಲ್ಲಿ ಎಂದು ಎರಡು ಕಡೆಯಲ್ಲಿ ಹಣ ಸಂದಾಯ ಮಾಡಬೇಕಾಗಿದೆ. ಇದರಿಂದ ರೈತರ ಮೇಲೆ ಬರೆ ಎಳೆಯುವ ಹುನ್ನಾರ ನಡೆಸಿದಂತಾಗಿದೆ ಎಂದು ಹಲವು ರೈತರು ತಮ್ಮ ಅಸಹಾಯಕತೆಯನ್ನು ಈ ರೀತಿಯಲ್ಲಿ ವ್ಯಕ್ತಪಡಿಸಿದರು.


ಒಂದು ಕಡೆಯಲ್ಲಿ ಅಂತರ್ಜಲ ಬತ್ತಿ ಕೊಳವೆ ಬಾವಿ, ತೆರೆದ ಬಾವಿಯಲ್ಲಿ ನೀರಿಲ್ಲದೆ ಅಡಿಕೆ ತೋಟ, ಮತ್ತಿತರ ಬೆಳೆಗಳು ಒಣಗುವಂತಾಗಿದ್ದು ಇನ್ನೊಂದು ಕಡೆಯಲ್ಲಿ ಪ್ರಾಣಿಗಳಿಂದ ಬೇಸಿಗೆ ಬೆಳೆ ಸಂರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಚಿಂತೆಯಲ್ಲಿದ್ದ ರೈತರಿಗೆ ಬಂದೂಕು ಪರವಾನಗಿ ನವೀಕರಣಕ್ಕಾಗಿ ಹಣ ಹೊಂದಿಸುವುದು ಕಷ್ಟಕರವಾಗಿದೆ. ಇದು ನುಂಗಲಾರದ ತುತ್ತಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

8 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

8 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

10 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

11 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

18 hours ago