ರಿಪ್ಪನ್ಪೇಟೆ: ಬದುಕಿಗೆ ಭಯ ಮುಖ್ಯವಲ್ಲ ಭರವಸೆ ಮುಖ್ಯ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ರಿಪ್ಪನ್ಪೇಟೆ ಸಮೀಪದ ಮಸರೂರು ಪೂಜಾರಗೊಪ್ಪ ಶ್ರೀವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಶ್ರಾವಣಮಾಸದ ಅಂಗವಾಗಿ ಆಯೋಜಿಸಲಾದ ಇಷ್ಟಲಿಂಗ ರುದ್ರಾಭಿಷೇಕ ಪೂಜೆ ನೆರವೇರಿಸಿ ಆಶೀರ್ವಚನ ನೀಡಿ ಸರ್ವ ಅನಿಷ್ಟಗಳನ್ನ ಪರಿಹರಿಸಿ ಇಷ್ಟಾರ್ಥ ಪ್ರದಾಯಕವಾದ ಈ ಲಿಂಗಕ್ಕೆ ಇಷ್ಟಲಿಂಗವೆಂದು ಕರೆಯುತ್ತಾರೆ. ಕಾರಣ ಅನುಭವಿಗಳು ಸಾವಧಾನ ಪೂರ್ವಕವಾಗಿ ಶರೀರದ ಮೇಲೆ ಯಾವಾಗಲೂ ಈ ಇಷ್ಟಲಿಂಗವನ್ನು ಧರಿಸಬೇಕೆಂದು ತಿಳಿ ಹೇಳಿದರು.
ಅನುಭವ ಹೆಚ್ಚಾದಷ್ಟು ಮನಸ್ಸು ಗಟ್ಟಿಯಾಗಿರುತ್ತದೆ. ಮನಸ್ಸು ಗಟ್ಟಿಯಾದಷ್ಟು ಆತ್ಮ ಸ್ಥೈರ್ಯ ಹೆಚ್ಚಾಗುತ್ತದೆ. ವ್ಯಕ್ತಿಯ ವ್ಯಕ್ತಿತ್ವ ಗಡಿಯಾದಲ್ಲಿರುವ ನಂಬರ್ ಆಗಬೇಕೆ ವಿನಃ ಕಾಲಕ್ಕೆ ತಕ್ಕಂತೆ ಬದಲಾಗುವ ಮುಳ್ಳುಗಳಾಗಬಾರದು ಎಂದು ನುಡಿದರು.
ಈ ಶ್ರಾವನ ಮಾಸದ ಪೂಜಾ ಕಾರ್ಯಕ್ರಮದಲ್ಲಿ ಎಂ.ಆರ್.ಶಾಂತವೀರಪ್ಪಗೌಡ, ಎಂ.ಆರ್. ಮುರುಗೇಶಪ್ಪಗೌಡ, ದೇವಸ್ಥಾನದ ಪ್ರಧಾನ ಅರ್ಚಕ ಶಿವಾನಂದಪ್ಪ, ರಾಚಪ್ಪ, ಎನ್.ವರ್ತೇಶ್, ರುದ್ರಪ್ಪ, ಗಣೇಶ ಕೆಂಚನಾಲ ಇನ್ನಿತರರು ಹಾಜರಿದ್ದರು.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…