Categories: Ripponpete

ಬಹು ವರ್ಷಗಳ ಬೇಡಿಕೆ ಈಡೇರಿಕೆ ; ಇಂದಿನಿಂದ ಅರಸಾಳುವಿನಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ

ರಿಪ್ಪನ್‌ಪೇಟೆ : ಹೊಸನಗರ, ರಿಪ್ಪನ್‌ಪೇಟೆ, ಹುಂಚ, ಕೋಣಂದೂರು, ನಿಟ್ಟೂರು, ಯಡೂರು, ಮಾಸ್ತಿಕಟ್ಟೆ, ನಗರ, ರಾಮಚಂದ್ರಪುರ, ಹೊಂಬುಜ, ಕೋಡೂರು, ಸೂಡೂರು, ಚಿನ್ನಮನೆ, ನಗರ ರೋಡ್ ಹೀಗೆ ಸುತ್ತಮುತ್ತಲಿನ ಊರಿನ ಪ್ರಯಾಣಿಕರು ಅರಸಾಳು ರೈಲ್ವೆ ನಿಲ್ದಾಣ ಸಮೀಪವಿದ್ದರು ರೈಲಿಗಾಗಿ ಆನಂದಪುರ ಹೋಗುವ ಅನಿವಾರ್ಯತೆ ಇತ್ತು.

ಸಾರ್ವಜನಿಕರ ಹಾಗೂ ಪ್ರಯಾಣಿಕರ ಬಹು ವರ್ಷಗಳಿಂದ ಅರಸಾಳು (ಮಾಲ್ಗುಡಿ) ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಮಾಡುವಂತೆ ಅನೇಕ ಬಾರಿ ರಿಪ್ಪನ್‌ಪೇಟೆ, ಅರಸಾಳು ಗ್ರಾಮದ ನಾಗರಿಕರು ಹಲವಾರು ಬಾರಿ ಮನವಿ ಸಲ್ಲಿಸಿದ್ದರು. ಹಾಗೆಯೇ ರಾಜ್ಯಮಟ್ಟದ ದಿನಪತ್ರಿಕೆಗಳು, ಟಿ. ವಿ.ಚಾನೆಲ್ ಗಳು ಸೇರಿದಂತೆ ಸ್ಥಳೀಯ ವೆಬ್ ನ್ಯೂಸ್ ಗಳು, ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಹಲವಾರು ಬಾರಿ ಸುದ್ದಿಗಳನ್ನು ಪ್ರಸಾರ ಮಾಡಿತ್ತು ಹಾಗೂ ಈ ವಿಷಯವನ್ನು ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಹಾಲಿ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಆರಗ ಜ್ಞಾನೇಂದ್ರ, ಮತ್ತು ಮಾಜಿ ಮಂತ್ರಿಗಳಾದ ಹರತಾಳು ಹಾಲಪ್ಪ ರವರ ಗಮನಕ್ಕೂ ತರಲಾಗಿತ್ತು. ಸಂಸದರ ವಿಶೇಷ ಪ್ರಯತ್ನದಿಂದ ಇಂದಿನಿಂಗ ದಿನಾ ನಾಲ್ಕು ಮುಖ್ಯ ರೈಲುಗಳು ಈ ನಿಲ್ದಾಣಗಳಲ್ಲಿ ನಿಲ್ಲಲಿವೆ.

ವೇಳಾಪಟ್ಟಿ ಹೀಗಿದೆ:

ಸಂಜೆಯ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲು ಅರಸಾಳು ನಿಲ್ದಾಣದಲ್ಲಿ ಸಂಜೆ 04:03 ಕ್ಕೆ ತಲುಪಲಿದೆ.

ಬೆಳಗಿನ ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು, ಅರಸಾಳು ನಿಲ್ದಾಣದಲ್ಲಿ 11:48 ಕ್ಕೆ ತಲುಪಲಿದೆ.

ರಾತ್ರಿಯ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲು, ಅರಸಾಳು ನಿಲ್ದಾಣದಲ್ಲಿ ರಾತ್ರಿ 10:05 ಕ್ಕೆ ತಲುಪಲಿದೆ.

ಮುಂಜಾನೆಯ ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ಅರಸಾಳು ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 5.45 ಕ್ಕೆ ತಲುಪಲಿದೆ. ಇದು ಸದ್ಯದ ಮಾಹಿತಿ. ಪರಿಪೂರ್ಣ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆಯು ಸದ್ಯದಲ್ಲಿಯೇ ಬಿಡುಗಡೆ ಮಾಡಲಿದೆ.

ಪ್ರಾಯೋಗಿಕವಾಗಿ ನೀಡಲಾಗುತ್ತಿರುವ ಈ ನಿಲುಗಡೆಯನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ಈ ನಿಲುಗಡೆಯನ್ನು ಮುಂದುವರೆಸುವ ಸಾಧ್ಯತೆಗಳಿರುವುದರಿಂದ, ಪ್ರಯಾಣಿಕರು ಈ ಅಮೂಲ್ಯ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

1 hour ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

14 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

17 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

17 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

22 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

24 hours ago