ರಿಪ್ಪನ್ಪೇಟೆ: ಸಮೀಪದ ಬಾಳೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಶಿವಮ್ಮ ಪದ್ಮನಾಭ ಅವಿರೋಧವಾಗಿ ಅಯ್ಕೆಯಾದರು.
ಈ ಹಿಂದೆ ಗ್ರಾಮ ಪಂಚಾಯ್ತಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷೆಯಾಗಿದ್ದು ನಂತರದಲ್ಲಿ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಿವಮ್ಮ ಪದ್ಮನಾಭ ಅವಿರೋಧವಾಗಿ ಆಯ್ಕೆಯಾಗುವುದರೊಂದಿಗೆ ಬಿಜೆಪಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ.
9 ಸದಸ್ಯ ಬಲ ಹೊಂದಿರುವ ಬಾಳೂರು ಗ್ರಾಮ ಪಂಚಾಯ್ತಿಯಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ 5 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಾಗಿ 4 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಆಯ್ಕೆಯಾಗಿದ್ದರು.
ಆರೋಪ:
ಅಧ್ಯಕ್ಷರನ್ನು ನಮ್ಮ ಪಕ್ಷದವರಿಗೆ ಮಾಡುವಂತೆ ಗ್ರಾಮ ಪಂಚಾಯ್ತಿ ಸದಸ್ಯರಿಗೆ ರಾತ್ರೋರಾತ್ರಿ ಭೇಟಿ ಮಾಡಿ ಇಲ್ಲಸಲ್ಲದ ಆಸೆ ಆಮಿಷ ಒಡ್ಡಿ ಇನ್ನೂ ಹೆಚ್ಚಿನ 20 ಆಶ್ರಯ ಮನೆಗಳನ್ನು ನೀಡುತ್ತೇನೆ ಮತ್ತು ಮುಂದಿನ ಚುನಾವಣೆಯಲ್ಲಿ ನಾನೇ ಗೆದ್ದು ಮಂತ್ರಿಯಾಗುತ್ತೇನೆಂದು ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿಕೊಂಡಿದ್ದರೂ ಕೂಡಾ ನಮ್ಮ ಬೆಂಬಲದಲ್ಲಿ ಗೆದ್ದ ಸದಸ್ಯರು ಯಾವುದನ್ನು ಪರಿಗಣಿಸದೇ ಪಕ್ಷ ನಿಷ್ಟೆ ತೋರಿದ್ದಾರೆಂದು ಹೇಳಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಶುಭಕೋರಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಳದಿ ಗ್ರಾಮ ಪಂಚಾಯ್ತಿ ಸಹ ಕಾಂಗ್ರೆಸ್ ಕೈಗೆ ದೊರೆಕಿದ್ದು ಈಗ ಬಾಳೂರು ಕೈ ಪಾಲಾಗಿರುವುದನ್ನು ನೋಡಿದರೆ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಗಣಪತಿ ಕೆರೆ ಅಭಿವೃದ್ದಿ ಬಿಟ್ಟರೆ ಇನ್ನಾವುದೇ ಅಭಿವೃದ್ದಿಯಲ್ಲಿ ಸಂಪೂರ್ಣ ವಿಫಲವಾಗಿದ್ದಾರೆಂದು ಆರೋಪಿಸಿದರು.
ಈವರೆಗೂ ಶಾಲಾ ಮಕ್ಕಳಿಗೆ ಸರಿಯಾದ ಪಠ್ಯ ಪುಸ್ತಕ ಇನ್ನಿತರ ಸರ್ಕಾರಿ ಸೌಲಭ್ಯಗಳನ್ನು ವಿತರಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವ ಸರ್ಕಾರ ಸಾಗರ ಕ್ಷೇತ್ರದ ಶಾಸಕರಿಗೆ ಗಣಪತಿ ಕೆರೆ ಒಂದಕ್ಕೆ ಖರ್ಚು ಮಾಡಿದ ಅನುದಾನದಲ್ಲಿ ಮಕ್ಕಳಿಗೆ ಸೌಲಭ್ಯವನ್ನು ನೀಡಬಹುದಿತು ಎಂದರು.
ಈ ಸಂದರ್ಭದಲ್ಲಿ ಅರಸಾಳು ಗ್ರಾ.ಪಂ. ಅಧ್ಯಕ್ಷ ಉಮಾಕರ, ಚಂದ್ರಶೇಖರ ಮಳವಳ್ಳಿ, ಉಂಡಗೋಡು ನಾಗಪ್ಪ, ಗಂಟೆ ದೇವರಾಜ್ಗೌಡ, ಎಂ.ಎಂ.ಪರಮೇಶ್, ರಮೇಶ್, ಸಂತೋಷ ಚಿಂತು ಇನ್ನಿತರ ಮುಖಂಡರು ಹಾಜರಿದ್ದರು.
ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…