Categories: Ripponpete

ಬಿಜೆಪಿಗೆ ಮೇ 10 ರಂದು ಉತ್ತರ ನೀಡಲಿದ್ದೇವೆ ; ಆರ್.ಎಂ.ಎಂ

ರಿಪ್ಪನ್‌ಪೇಟೆ: ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಅಶಾಂತಿ ಅರಾಜಕತೆಯನ್ನು ಸೃಷ್ಟಿಸುವಂತಹ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿರುವುದನ್ನು ಬಿಜೆಪಿ ಚುನಾವಣಾ ಪ್ರಚಾರದ ವಿಚಾರವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಉತ್ತರ ನೀಡಲಿದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಹೇಳಿದರು.

ರಿಪ್ಪನ್‌ಪೇಟೆಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಮತ್ತು ಗ್ಯಾಸ್ ಹಾಗೂ ಇಂಧನ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ಬದುಕು ದುಸ್ಥರವಾಗಿದೆ. ಗೊಬ್ಬರ ಬೆಲೆಯನ್ನು ಏಕಾಏಕಿ 6 ಪಟ್ಟು ಏರಿಸುವುದರೊಂದಿಗೆ 2014 ರಲ್ಲಿ ಪೊಟಾಸ್ ಗೊಬ್ಬರ ಬೆಲೆ 420 ರೂ. ಗಳಾಗಿದ್ದು ಈಗ 45 ಕೆ.ಜಿ ಚೀಲದ ಬೆಲೆ 2000 ರೂ. ಏರಿಸಿ 5 ಕೆ.ಜಿ. ಕಡಿತಗೊಳಿಸಿದ್ದಾರೆ. ಅಡಿಕೆ ಎಲೆ ಚುಕ್ಕೆರೋಗದಿಂದ ಸಾಕಷ್ಟು ರೈತರು ಕಂಗಲಾಗಿದ್ದರೂ ಕೂಡಾ ಕ್ಷೇತ್ರದ ಶಾಸಕರು ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ ಎಂದರು.

ಇನ್ನೂ ಹೊರ ದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುವುದರಿಂದಾಗಿ ನಮ್ಮ ರೈತರು ಬೆಳೆದ ಅಡಿಕೆ ಕೊಳ್ಳುವವರು ದರ ಕಡಿತಗೊಳಿಸುವರೆಂಬ ಭಯ ಕಾಡುವಂತಾಗಿದೆ ಕಾಂಗ್ರೆಸ್‌ನಲ್ಲಿರುವವರು ಸಹ ಧರ್ಮದ ಪರಿಪಾಲಕರೇ ಆಂಜನೇಯ, ಹನುಮಂತ ಇಬ್ಬರು ಒಂದೇ ಆಗಿದ್ದು ಇತ್ತೀಚೆಗೆ ರಾಹುಲ್‌ಗಾಂಧಿಯವರು ಮೀನು ಸೇವನೆ ಮಾಡಿದ್ದ ಕಾರಣ ದೇವಸ್ಥಾನಕ್ಕೆ ಹೋಗಲಿಲ್ಲ ಆದರೆ ಅದೇ ಸಿ.ಟಿ.ರವಿ ಮಾಂಸ ಸೇವಿಸಿ ದೇವಸ್ಥಾನಕ್ಕೆ ಹೋಗಿ ಬಂದರಲ್ಲ ಹಾಗಾದರೆ ನಮ್ಮ ಸಂಸ್ಕೃತಿ ಸಂಸ್ಕಾರ ಅರಿವು ಇಲ್ಲದ ಬಿಜೆಪಿಯವರಿಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಅಶಾಂತಿ ಅರಾಜಕತೆ ಸೃಷ್ಟಿಸುವ ಸಂಘಟನೆಗಳ ವಿರುದ್ದ ಕಾನೂನಾತ್ಮಕ ಕ್ರಮ ಕೈಗೊಳ್ಳುವುದರ ಬಗ್ಗೆ ಹೇಳಿರುವುದು ಕಂಡು ದುರುದ್ದೇಶದಿಂದ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆಂದು ಹೇಳಿ ಈ ಹಿಂದೆ ಬಂಗಾರಪ್ಪನವರು 1999 ರಲ್ಲಿನ ಚುನಾವಣೆಯಲ್ಲಿ ಬಂದಂತಹ ಫಲಿತಾಂಶ ಈ ಭಾರಿ ಬರಲಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ರಾಮಚಂದ್ರ, ಎಂ.ಎಂ.ಪರಮೇಶ್, ರವೀಂದ್ರ ಕೆರೆಹಳ್ಳಿ ನರಸಿಂಹ ಕೆರೆಹಳ್ಳಿ, ಅಮ್ಮೀರ್‌ಹಂಜಾ, ಹರ್ಷ, ರಮೇಶ ಇನ್ನಿತರರು ಹಾಜರಿದ್ದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

3 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

5 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

6 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

6 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

8 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

10 hours ago