Categories: Ripponpete

ಬಿಲ್ಲೇಶ್ವರ ಶಾಲೆಯ ಶಿಕ್ಷಕರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಸುಳ್ಳು ದೂರು ಆರೋಪ ; ವಿದ್ಯಾರ್ಥಿಗಳು, ಪೋಷಕರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ


ರಿಪ್ಪನ್‌ಪೇಟೆ: ಸಮೀಪದ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಲ್ಲೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಶಿಕ್ಷಕರಿಬ್ಬರ ದುರುದ್ದೇಶದಿಂದ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಆರೋಪಿಸಿ ಇಂದು ಶಾಲಾಭಿವೃದ್ದಿ ಸಮಿತಿಯವರು ಪೋಷಕರು ಹಾಗೂ ಸಾರ್ವಜನಿಕರು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಸುಳ್ಳು ದೂರು ದಾಖಲಿಸಿದ ಪೋಷಕರ ವಿರುದ್ದ ಪ್ರತಿಭಟನೆ ನಡೆಸುವುದರೊಂದಿಗೆ ತರಗತಿಯನ್ನು ಬಹಿಷ್ಕರಿಸಿ ಧರಣಿ ನಡೆಸಿದರು.


ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ನಮಗೆ ಮೇಲ್ಕಂಡ ಶಿಕ್ಷಕರು ಬರುವವರೆಗೂ ನಾವು ತರಗತಿಗೆ ಹೋಗುವುದಿಲ್ಲ ಎಂದು ಹಠ ಹಿಡಿದು ತಮ್ಮ ಪೋಷಕರೊಂದಿಗೆ ರಾಜ್ಯಹೆದ್ದಾರಿಯ ಶಾಲಾ ಮುಂಭಾಗ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ್ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಭೇಟಿ ನೀಡಿ ಪ್ರತಿಭಟನಾ ನಿರತರ ವಿದ್ಯಾರ್ಥಿಗಳ ಬಳಿ ಅಹವಾಲು ಆಲಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗೆ ತಬ್ಬಿಬ್ಬಾದ ಅಧಿಕಾರಿಗಳು ಇಂತಹ ವಿಚಾರವನ್ನು ಮಕ್ಕಳ ಎದುರು ಹೇಳಲು ಸಾಧ್ಯವಿಲ್ಲ ಪೊಷಕರರೊಂದಿಗೆ ಸಮಾಲೋಚನೆ ನಡೆಸಿ ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ ಹಿನ್ನಲೇಯಲ್ಲಿ ವಿದ್ಯಾರ್ಥಿಗಳು ಸಮದಾನ ಚಿತ್ತರಾಗಿ ಪೋಷಕರ ಹಾಗೂ ಅಧಿಕಾರಿಗಳ ಸಮಲೋಚನೆಗೆ ಸಹಮತ ವ್ಯಕ್ತಪಡಿಸಿದರು.


ಪ್ರತಿಭಟನಾಕಾರೊಂದಿಗೆ ಶಾಲಾ ಆವರಣದಲ್ಲಿ ಚರ್ಚಿಸುವ ಮೂಲಕ ಕಾಯ್ದೆಯಡಿ ಯಾರಿಗೂ ಏನು ತಿಳಿಯದು ಪಾರದರ್ಶಕ ತನಿಖೆಯಿಂದ ಶಾಲಾ ಶಿಕ್ಷಕರನ್ನು ಮತ್ತು ವಿದ್ಯಾರ್ಥಿ ಸಮೂಹದೊಂದಿಗೆ ಪ್ರತ್ಯೇಕ ಮಾಹಿತಿ ಪಡೆದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವುದಾಗಿ ಹೇಳಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು.


ಪ್ರತಿಭಟನಾ ನೇತೃತ್ವವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ, ನಾಗಭೂಷಣ,ಗಣೇಶ್ ಬಿಲ್ಲೇಶ್ವರ, ಸತೀಶ್,ಎಸ್ ರಾಜು ಗರ್ತಿಕೆರೆ, ಅಭಿಷೇಕ, ಕಿರಣಕುಮಾರ್, ರಾಮಪ್ಪ, ಹೆಚ್.ಎನ್.ಗುರುರಾಜಭಂಡಾರಿ, ಸಚಿನ್, ಎನ್.ರಾಘವೇಂದ್ರ,
ಸತೀಶ್ ಈರನಬೈಲು, ಕೆ.ವೈ.ಮಂಜುನಾಥ, ಕೆ.ಈ.ಗಣೇಶ್, ಕಿರಣ ಇನ್ನಿತರ ಊರಿನ ಗ್ರಾಮಸ್ಥರು ಪಾಲ್ಗೊಂಡು ನಂತರ ಹುಂಚ ನಾಡಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು ಮತ್ತು ತೀರ್ಥಹಳ್ಳಿ ಡಿವೈಎಸ್‌ಪಿಯವರಿಗೂ ಮನವಿ ಸಲ್ಲಿಸಿದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

10 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

10 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

11 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

12 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

15 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

16 hours ago