Categories: Ripponpete

ಬಿಸಿಯೂಟದ ಸಿಬ್ಬಂದಿ ಮತ್ತು ಶಿಕ್ಷಕರ ಬದಲಾವಣೆಗೆ ಆಗ್ರಹಿಸಿ ಪೋಷಕರಿಂದ ಬಿಇಒಗೆ ದೂರು

ರಿಪ್ಪನ್‌ಪೇಟೆ: ಹಿರೇಮೈಥೆ ಸರ್ಕಾರಿ ಹಿರಿಯ ಪ್ರಾಥಮಿಕ ಮಕ್ಕಳಿಗೆ ಬಿಸಿಯೂಟದ ವಿತರಣೆಯಲ್ಲಿ ತಾರತಮ್ಯ ಅನುಸರಿಸುತ್ತಿದ್ದಾರೆಂದು ವಿದ್ಯಾರ್ಥಿಗಳ ಪೋಷಕರು ಮತ್ತು ಗ್ರಾಮಸ್ಥರು ದೂರಿ ತಕ್ಷಣ ಅಡುಗೆ ಸಿಬ್ಬಂದಿ ಮತ್ತು ಶಿಕ್ಷಕರನ್ನು ಬದಲಾಯಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಶಾಲೆಯಲ್ಲಿ ಕಳೆದ 20 ವರ್ಷಗಳಿಂದ ಮುಖ್ಯ ಅಡುಗೆಯವರಾಗಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿ ಕಳೆದ ಒಂದು ವರ್ಷದಿಂದ ಮಕ್ಕಳಿಗೆ ಬಿಸಿಯೂಟ ಕೊಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದು ಕೊಡುವ ಆಹಾರದಲ್ಲಿ ತಾರತಮ್ಯ ನೀತಿ ಅನುಸರಿಸಿದ್ದಾರೆ. ಈ ಬಗ್ಗೆ ಶಾಲಾಭಿವೃದ್ದಿ ಸಮಿತಿಯವರ ಸಾಕಷ್ಟು ಬಾರಿ ಮುಖ್ಯೋಪಾದ್ಯಾಯರ ಗಮನಕ್ಕೆ ತರಲಾಗಿದ್ದರೂ ಕೂಡಾ ಬಿಸಿಯೂಟದ ಅಡುಗೆ ಸಿಬ್ಬಂದಿ ವಿರುದ್ಧ ಮುಖ್ಯೋಪಾಧ್ಯಾಯರು ಸಾರ್ವಜನಿಕರಿಂದ ಮತ್ತು ವಿದ್ಯಾರ್ಥಿಗಳಿಂದ ಸಾಕಷ್ಟು ದೂರುಗಳು ಬರುತ್ತಿವೆ ಎಂದು ತಿಳಿಹೇಳಲು ಹೋದರೆ ಶಿಕ್ಷಕರಿಗೆ ಬಾಯಿಗೆ ಬಂದಂತೆ ಬೈದು ನಿಂದಿಸುತ್ತಿರುವುದು ಶಿಕ್ಷಕರ ಮತ್ತು ಅಡುಗೆಯವರ ಮಧ್ಯೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದ್ದು ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿ ವಿದ್ಯಾರ್ಥಿಗಳ ಮತ್ತು ಪೋಷಕರ ಎದುರೇ ಜಗಳವಾಡುತ್ತಿರುತ್ತಾರೆ.

ಈ ತಕ್ಷಣ ಅಡುಗೆ ಸಿಬ್ಬಂದಿ ಮತ್ತು ಶಿಕ್ಷಕರನ್ನು ಬದಲಾಯಿಸು ಮೂಲಕ ಶಾಲೆಯ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ಹಾಗೂ ಮಕ್ಕಳಲ್ಲಿ ಮತ್ತು ಶಿಕ್ಷಕರ ಬಾಂಧವ್ಯವನ್ನು ಕಾಪಾಡುವಂತೆ ತಮ್ಮಲ್ಲಿ ಮನವಿ ಮಾಡುತ್ತೇವೆ. ಈಗಿರುವ ಬಿಸಿಯೂಟದ ಸಿಬ್ಬಂದಿಯನ್ನು ಮತ್ತು ಶಿಕ್ಷಕರನ್ನು ಬದಲಾಯಿಸದಿದ್ದರೆ ನಮ್ಮ ಶಾಲಾ ಮುಂಭಾಗ ಪ್ರತಿಭಟನೆಯನ್ನು ಸಹ ನಡೆಸಬೇಕಾಗುತ್ತದೆ ಬಿಇಒಗೆ ಬರೆದ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

11 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

14 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

14 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

19 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

21 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago