ರಿಪ್ಪನ್ಪೇಟೆ: ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಗ್ರಂಥಾಲಯಗಳಲ್ಲಿ ಆದ್ಯತೆ ನೀಡಲಾಗುತ್ತಿದ್ದು ಇದರ ಸದುಪಯೋಗ ಮಾಡಿಕೊಂಡು ಪ್ರಗತಿ ಹೊಂದಬೇಕು ಎಂದು ಅಮೃತ ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಮಂಜುಳಾ ರಾಘವೇಂದ್ರ ಕರೆ ನೀಡಿದರು.
ಸಮೀಪದ ಅಮೃತ ಕೆ.ಪಿ.ಎಸ್ ಶಾಲೆಯಲ್ಲಿ 9 ದಿನಗಳ “ಮಕ್ಕಳ ಬೇಸಿಗೆ ಶಿಬಿರಕ್ಕೆ’’ ಚಾಲನೆ ನೀಡಿ ಮಾತನಾಡಿ, ಮಕ್ಕಳು ಕಥೆ ಕಾದಂಬರಿ ಪುಸ್ತಕಗಳು ನಿಯತಕಾಲಕ್ಕೆಗಳನ್ನು ಓದುವುದರಿಂದ ಮಕ್ಕಳು ಸಮಾಜದಲ್ಲಿ ಉತ್ತಮ ಸಂಸ್ಕೃತಿ ಬೇಳಸಿಕೊಳ್ಳಲು ಸಾಧ್ಯವೆಂದರು.
ಸಂಪನ್ಮೂಲ ವ್ಯಕ್ತಿ ಬಿ.ಆರ್.ಸಿ.ಸತ್ಯನಾರಾಯಣ ಮಾತನಾಡಿ, ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಜ್ಞಾನಾವನ್ನು ಹೆಚ್ಚಿಸಿಕೊಳ್ಳಲು ಗ್ರಂಥಾಲಯಗಳು ಅತ್ಯಗತ್ಯವಾಗಿವೆ. ಸಾರ್ವಜನಿಕರು ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಮಕ್ಕಳಿಗೂ ಗ್ರಂಥಾಲಯದ ಅಗತ್ಯತೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಈ ಶಿಬಿರದಲ್ಲಿ ಮೂವತ್ತಕ್ಕೂ ಆಧಿಕ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಪಿಡಿಓ ಸುಧಾ, ಗ್ರಂಥಪಾಲಕಿ ಕಲಾವತಿ, ವಿ.ಆರ್.ಡಬ್ಲ್ಯೂ ನ ಸಾವಿತ್ರಿ, ಗ್ರಾಮ ಪಂಚಾಯ್ತಿ ಸಿಬ್ಬಂದಿವರ್ಗ ಹಾಜರಿದ್ದರು.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…