Categories: Ripponpete

ಮತದಾರರು ಅಭ್ಯರ್ಥಿಗಳ ಕಾರ್ಯವೈಖರಿ ವಿಮರ್ಶೆ ಮಾಡುವಂತಾಗಬೇಕು ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಕಳೆದ ಐದು ವರ್ಷದ ಅವಧಿಯಲ್ಲಿ ಒಂದು ವರ್ಷದಲ್ಲಿ ಸಮ್ಮಿಶ್ರ ಸರ್ಕಾರ ನಂತರ ಎರಡು ವರ್ಷ ಕೊರೋನಾ ಇದ್ದ 2 ವರ್ಷದ ಅವಧಿಯಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ಸರ್ಕಾರದಿಂದ 3454 ಕೋಟಿ ರೂ. ಅನುದಾನವನ್ನು ತರುವುದರೊಂದಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ರಾಮೀಣ ಕುಡಿಯುವ ನೀರಿನ ಜಲಜೀವನ್ ಮಿಷನ್ ಯೋಜನೆಯಡಿ ತಾಲ್ಲೂಕಿಗೆ 700 ಕೋಟಿ ರೂ. ಅನುದಾನವನ್ನು ನೀಡುವ ಮೂಲಕ ಶಾಶ್ವತ ಶುದ್ದ ಕುಡಿಯುವ ನೀರಿನ ಯೋಜನೆಯನ್ನು ತರಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸಮೀಪದ ಕೋಡೂರು ಗ್ರಾಮದಲ್ಲಿ ಚುನಾವಣಾ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ, ಅಡಿಕೆಯಿಂದ ಮಾರಕ ರೋಗ ಬರುತ್ತದೆಂದು ಕಾಂಗ್ರೆಸ್ ಸರ್ಕಾರವಿದ್ದಾಗ ನ್ಯಾಯಾಲಯಕ್ಕೆ ಅಫಿಡೆವಿಟ್ ನೀಡಿದ್ದು ಇದರಿಂದಾಗಿ ಮಲೆನಾಡಿನ ರೈತರು ಕಂಗಲಾಗುವಂತಾಗಿದ್ದು ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ನನ್ನನ್ನು ಅಡಿಕೆ ಬೆಳೆಗಾರರ ಟಾಸ್ಕ್ ಫೋರ್ಸ್ ಅಧ್ಯಕ್ಷರನ್ನಾಗಿ ಮಾಡಿ ಅದರಿಂದ ಹೋರಾಟ ಮಾಡಿ ಕೇಂದ್ರದ ಗಮನಸೆಳೆದು ಅಡಿಕೆ ಸೇವನೆಯಿಂದ ಯಾವುದೇ ರೋಗ ಇಲ್ಲ ಅದೊಂದು ಔಷಧಿಯು ಗುಣವಿರುವ ವಸ್ತು ಎಂದು ಸಂಶೋಧನೆಯಿಂದ ವರದಿ ಬಂದಿದ್ದು ಮುಂದಿನ ದಿನಗಳಲ್ಲಿ ನ್ಯಾಯಾಲಯಕ್ಕೆ ವರದಿ ನೀಡಿ ರೈತರಲ್ಲಿನ ಭಯವನ್ನು ದೂರಗೊಳಿಸುವುದರೊಂದಿಗೆ ಸ್ಥಿರ ಬೆಲೆ ನಿಲ್ಲುವಂತೆ ಕಾಪಾಡುವುದು ನನ್ನ ಮೂಲ ಗುರಿಯಾಗಿದೆ.ನಾನು ಮತದಾರ ಅಡಿಕೆ ಬೆಳೆಗಾರರ ಹಿತ ಕಾಯುವ ಕಾವಲುಗಾರ ಈ ಬಗ್ಗೆ ತಾವು ನನ್ನ ಕಾರ್ಯವನ್ನು ಹೋದಲಿ ಬಂದಲಿ ವಿಮರ್ಶೆ ಮಾಡಿ ಎಂದು ಹೇಳಿ ಈ ಬಾರಿ ನನಗೆ ಒಂದು ಅವಕಾಶ ನೀಡಿ ಬೆಂಬಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್‌ಪೂಜಾರಿ, ಮಾಜಿ ಶಾಸಕ ಬಿ.ಸ್ವಾಮಿರಾವ್, ಮುಖಂಡರಾದ ಎನ್.ಆರ್.ದೇವಾನಂದ, ನಾಗೇಂದ್ರಕಲ್ಲೂರು, ಗ್ರಾ.ಪಂ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷ ಜಯಪ್ರಕಾಶ್‌, ವಿಜೇಂದ್ರ ರಾವ್, ಪುಟ್ಟಪ್ಪ, ಸುಧೀರ್, ಪಕ್ಷದ ಮುಖಂಡರು ಪಾಲ್ಗೊಂಡಿದರು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

18 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

18 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

19 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

21 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

23 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

1 day ago