Categories: Ripponpete

ಮನೆ ಹಾಳು ಮಾಡೋದ್ರಲ್ಲಿ ಹರತಾಳು ಹಾಲಪ್ಪ ನಂಬರ್ ಒನ್ ; ಬೇಳೂರು ಗಂಭೀರ ಆರೋಪ

ರಿಪ್ಪನ್‌ಪೇಟೆ: ಹರತಾಳು ಹಾಲಪ್ಪ ಅವರು ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬವನ್ನು ಒಡೆದು ಮನೆ ಹಾಳು ಮಾಡಿದ್ರು ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಅವರ ಕುಟುಂಬ ಒಡೆದು ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆಂದು ಮಾಜಿ ಶಾಸಕ ಹಾಗೂ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.


ಪಟ್ಟಣದಲ್ಲಿ ಚುನಾವಣಾ ಪ್ರಚಾರ ಭಾಷಣ ಮುಗಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ತನ್ನ ರಾಜಕೀಯ ಜೀವನಕ್ಕಾಗಿ ಮನೆ ಹಾಳು ಮಾಡೋ ಕೆಲಸ ಗೊತ್ತಿರುವುದು ರಾಜ್ಯದಲ್ಲಿ ಹರತಾಳು ಹಾಲಪ್ಪನಿಗೆ ಮಾತ್ರ. ಹಾಲಪ್ಪನ ಬಗ್ಗೆ ನಾನು ಟೀಕೆ ಮಾಡೋದೇ ಬೇಡ ಅವರ ಭ್ರಷ್ಟಾಚಾರ, ಪಕ್ಷ ಒಡೆದಿದ್ದನ್ನೆ ಅವರ ಪಕ್ಷದವರೇ ಹೇಳ್ತಿದ್ದಾರೆ. ವಿರೋಧ ಪಕ್ಷವಾಗಿ ನಾವು ಕೂಡ ನಮ್ಮ ಕೆಲಸ ಮಾಡಿದ್ದೇವೆ. ಈಗಾಗಲೇ ಹೊಸನಗರ-ಸಾಗರದಲ್ಲಿ ಒಂದು ಸುತ್ತಿನ ಪ್ರಚಾರ ಮುಗಿಸಿದ್ದೇನೆಂದು ಗೋಪಾಲಕೃಷ್ಣ ಬೇಳೂರು ಹೇಳಿದರು.


ನಾಮಪತ್ರ ಸಲ್ಲಿಕೆ ವೇಳೆ ಭಾರಿ ಬೆಂಬಲಿಗರು ಕಾರ್ಯಕರ್ತರು ಆಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದು ಓ¥ನಿಂಗ್ ನನಗೆ ನೀಡಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಶೆಟ್ಟರ್ ಸೇರ್ಪಡೆಯಿಂದ ಪಕ್ಷಕ್ಕೆ ಆನೆ ಬಲ ಬಂದಂತೆ ಆಗಿದೆ. ಮಾಜಿ ಸಿಎಂ ಬಿಜೆಪಿ ಕಟ್ಟಾಳು ಕಾಂಗ್ರೆಸ್ ಪಕ್ಷಕ್ಕೆ ಬಂದಿರುವುದು ಖುಷಿಯ ವಿಚಾರವೆಂದರು.


ಈ ಬಾರಿ ಗೆಲುವು ನನ್ನದೆ:

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಭಾರಿ ಗೆಲುವು ನನ್ನದೇ ಬಿಜೆಪಿ ರಾಜ್ಯದಲ್ಲಿ ಹಾಗೂ ನನ್ನ ಕ್ಷೇತ್ರದಲ್ಲಿ ಮನೆಯೊಂದು ಮೂರು ಬಾಗಿಲಿನಂತಾಗಿಗೆ. ಈಗಾಗಲೇ ಬಿಜೆಪಿ ಪಕ್ಷದ ಹಿರಿಯ ಮುಖಂಡರುಗಳು ಹಾಗೂ ಪ್ರಾಮಾಣಿಕ ಕಾರ್ಯಕರ್ತರು ಹರತಾಳು ಹಾಲಪ್ಪ ವಿರುದ್ಧ ಸಿಡಿದೆದ್ದಿದ್ದಾರೆಂದು ಹೇಳಿದರು.


ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಸದಸ್ಯರಾದ ರಾಮಚಂದ್ರ, ಶ್ವೇತಾ, ತಾ.ಪಂ ಮಾಜಿ ಅಧ್ಯಕ್ಷ ವಾಸಪ್ಪಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಹಾರೋಹಿತ್ತಲು ಹೆಚ್.ವಿ.ಈಶ್ವರಪ್ಪಗೌಡ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಎನ್.ಚಂದ್ರೇಶ್, ಡಿ.ಈ.ಮಧುಸೂದನ್, ಪ್ರಕಾಶ್ ಪಾಲೇಕರ್, ಆಸೀಫ್ ಭಾಷಾ,
ಉಲ್ಲಾಸ ತೆಂಕೋಲ, ಮಳವಳ್ಳಿ ಮಂಜುನಾಥ, ಜಿ.ಆರ್.ಗೋಪಾಲಕೃಷ್ಣ, ರವೀಂದ್ರ ಕೆರೆಹಳ್ಳಿ, ಬಿ.ಎಸ್.ಎನ್.ಎಲ್ ಶ್ರೀಧರ, ಆರ್.ಹೆಚ್.ಶ್ರೀನಿವಾಸ ಆಚಾರ್, ಧನಲಕ್ಷ್ಮಿ, ಸಾಹಿದ ಲೇಖನಮೂರ್ತಿ ಇನ್ನಿತರರು ಹಾಜರಿದ್ದರು.

Malnad Times

Recent Posts

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

1 hour ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

2 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

7 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

8 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

21 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

23 hours ago