ರಿಪ್ಪನ್ಪೇಟೆ : ಪೊದೆಯೊಂದರಲ್ಲಿ ಐದು ಮರಿಗಳಿಗೆ ಜನ್ಮವಿತ್ತ ಬೀದಿ ನಾಯಿ ಮೂರು ದಿನಗಳ ಒಳಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿತ್ತು. ಇನ್ನೂ ಕಣ್ಣು ಬಿಡದ ಆ ಮರಿಗಳಿಗೆ ಹಾಲುಣಿಸುವ ತಾಯಿ ಬಾರದಿದ್ದಾಗ ಹಸಿವಿನಿಂದ ಕಂಗೆಟ್ಟು ತೀರಾ ಹಠ ಮಾಡುವುದನ್ನು ಕಂಡು ದಾರಿ ಹೋಕರು ಗಮನಿಸಿ, ಪಶು ವೈದ್ಯಕೀಯ ಪರಿವೀಕ್ಷಕ ವಿ ರಂಗಪ್ಪ ಅವರ ಗಮನಕ್ಕೆ ತಂದರು.
ದಿಕ್ಕಿಲ್ಲದ ಆ ಐದು ಮರಿಗಳನ್ನು ಆಸ್ಪತ್ರೆಗೆ ತಂದು ರಟ್ಟಿನ ಬಾಕ್ಸ್ ನಲ್ಲಿ ಅವುಗಳಿಗೆ ರಕ್ಷಣೆ ನೀಡಿ, ಪ್ರತಿನಿತ್ಯ ಸಿರಂಜ್ ಮೂಲಕ ಮೂರು ಹೊತ್ತು ಅವುಗಳಿಗೆ ಹಾಲುಣಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿವೆ.
ಹೊಸನಗರ ತಾಲೂಕಿನಲ್ಲಿ ಸುಮಾರು 25ಕ್ಕೂ ಅಧಿಕ ಪಶು ಆಸ್ಪತ್ರೆಗಳಿದ್ದು ವೈದ್ಯರು ಹಾಗೂ ಪರಿವೀಕ್ಷಕರು ಮತ್ತು ಡಿ ದರ್ಜೆಯ ನೌಕರರ ತನಕ ಕೇವಲ 14 ಜನ ಮಾತ್ರ ನೌಕರರಿದ್ದರೆ, ದಿನನಿತ್ಯದ ಕಾರ್ಯದ ಒತ್ತಡದ ನಡುವೆಯೂ ಮೂರಕ್ಕೂ ಹೆಚ್ಚು ಪಶುವೈದ್ಯ ಆಸ್ಪತ್ರೆಗಳ ಉಸ್ತುವಾರಿಯನ್ನು ಹೊಂದಿರುವ ವೈದ್ಯ ರಂಗಪ್ಪ ಐದು ಬೀದಿ ನಾಯಿಮರಿಗಳಿಗೆ ಪ್ರತಿದಿನ ಮೂರು ಹೊತ್ತು ಹಾಲನ್ನು ಸಿರೇಂಜ್ ಮೂಲಕ ನೀಡುತ್ತಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…