Categories: Ripponpete

ಮಾ. 9 ರಿಂದ 17 ರವರೆಗೆ ಹೊಂಬುಜ ಜಗನ್ಮಾತೆ ಪದ್ಮಾವತಿ ದೇವಿ ಮಹಾರಥೋತ್ಸವ


ರಿಪ್ಪನ್‌ಪೇಟೆ: ಜೈನರ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಪಡೆದಿರುವ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಮಾ. 9 ರಿಂದ 15 ರವರೆಗೆ ಭಗವಾನ್ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಜಗದ್ಗುರ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ದಿವ್ಯಸಾನಿದ್ಯದಲ್ಲಿ ಏರ್ಪಡಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಾ‌. 9 ರಂದು ಗುರುವಾರ ಶ್ರೀಮಠದ ಬಸದಿಯಲ್ಲಿ ಶ್ರೀ ನೇಮಿನಾಥ ಸ್ವಾಮಿ ಬಸದಿ ಗಣಧರವಲಯ ಆರಾಧನೆ.
10 ರಂದು ಮಕ್ಕಳ ಬಸದಿಯಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ ಚಿಕ್ಕಬಸದಿ ಕಲ್ಯಾಣ ಮಂದಿರ ಅರಾಧನೆ. 11 ರಂದು ಬೋಗಾರ ಬಸದಿಯಲ್ಲಿ ಭಕ್ತಾಸುರ ಆರಾಧನೆ. ಮಾ. 12 ರಂದು ಭಾನುವಾರ ಇಂದ್ರಪ್ರತಿಷ್ಟೆ ವಿಮಾನ ಶುದ್ದಿ ಯಕ್ಷ ಪ್ರತಿಷ್ಟೆ ಧ್ವಜಾರೋಹಣ ಮಹಾನೈವೇದ್ಯ ಪೂಜೆ ನಾಂದಿ ಮಂಗಲ ವಾಸ್ತು ಶಾಂತಿ ಮೃತ್ತಿಕಾ ಸಂಗ್ರಹ ರಾತ್ರಿ 8 ಕ್ಕೆ ನಾಗವಾಹನೋತ್ಸವ. ಮಾ. 13 ರಂದು ಸೋಮವಾರ ನಿತ್ಯನಿಧಿ ಸಹಿತ ಶ್ರೀಸ್ವಾಮಿ ಮತ್ತು ಶ್ರೀಅಮ್ಮನವರ ಸನ್ನಿಧಿಯಲ್ಲಿ ಅಭಿಷೇಕ ಕಲಿಕುಂಡಯಂತ್ರಾರಾಧನೆ ರಾತ್ರಿ 8 ಕ್ಕೆ ಸಿಂಹವಾಹನೋತ್ಸವ. ಮಾ. 14 ರಂದು ಮಂಗಳವಾರ ನಿತ್ಯವಿಧಿ ಸಹಿತ ಜಲಾಗ್ನಿ ಹೋಮ ಶಾಂತಿ ಚಕ್ರಾರಾಧನೆ ಶ್ರೀಬಲಿ ಸಂಜೆ 6 ಕ್ಕೆ ಧಾರ್ಮಿಕ ಸಮಾರಂಭ “ಸಿದ್ದಾಂತ ಕೀರ್ತೀ ಪ್ರಶಸ್ತಿ ಪ್ರದಾನ’’ ರಾತ್ರಿ 8 ಕ್ಕೆ ಬೆಳ್ಳಿ ರಥೋತ್ಸವ ಪುಷ್ಪ ರಥೋತ್ಸವ
ಮಾ. 15 ಬುಧವಾರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 12 ಗಂಟೆಗೆ ನಿತ್ಯ ವಿಧಿ ಸಹಿತ ಮಹಾನೈವೇದ್ಯ ಪೂಜೆ ಜಗನ್ಮಾತೆ ಪದ್ಮಾವತಿ ದೇವಿ ರಥಾರೋಹಣ 1.25 ಕ್ಕೆ ಮಹಾರಥೋತ್ಸವ ಜರುಗಲಿದೆ.


ಮಾ. 16 ರಂದು ಗುರುವಾರ 11 ಗಂಟೆಗೆ ನಿತ್ಯವಿಧಿ ಸಹಿತ ತ್ರಿಕೂಟ ಜಿನಾಲಯದ ಭಗವಾನ್ ಶ್ರೀಪಾರ್ಶ್ವನಾಥ ಸ್ವಾಮಿಗೆ 108 ಕಲಶಗಳ ಮಹಾಭಿಷೇಕ ಮತ್ತು ಸಂಘ ಪೂಜೆ ಜರುಗಲಿದೆ.
ಮಾ‌. 17 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಕುಂಕುಮೋತ್ಸವ ಧ್ವಜಾವರೋಹಣ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

7 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

7 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

8 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

8 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

10 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

13 hours ago