Categories: Ripponpete

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ ; ಡಾ. ರತ್ನಾಕರ ಸಿ ಕುನುಗೋಡು

ರಿಪ್ಪನ್‌ಪೇಟೆ : ಎಲ್ಲ ಭೇದಗಳನ್ನು ಅಳಿಸಿ ಸಮತೆಯ ಕಣ್ಣಲ್ಲಿ ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವಜನತೆಯನ್ನು ರೂಪಿಸುವ ತುರ್ತು ಇದೆ ಎಂದು ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಸಿ ಕುನುಗೋಡು ಹೇಳಿದರು.


ದಿ. ರೇಣುಕಪ್ಪಗೌಡ ಪ್ರತಿಷ್ಠಾನ, ಮಲೆನಾಡು ಕಲಾತಂಡ ಮಸರೂರು ಹಾಗ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ರಂಗಭೂಮಿ ದಿನಾಚರಣೆಯಲ್ಲಿ ‘ರಂಗಭೂಮಿ ಅಂದು ಮತ್ತು ಇಂದು’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ, ಆದಿಮ ರಂಗ ಕ್ರಿಯೆಗಳು ಹಸಿವು, ಫಲವತ್ತತೆ, ಚರಿತ್ರೆಯ ಪ್ರಸರಣ, ಆರಾಧನೆ ಹಾಗೂ ಆಧ್ಯಾತ್ಮಿಕತೆಯ ಅಂಶಗಳನ್ನು ಒಳಗೊಂಡ ಪ್ರಕ್ರಿಯೆಯಾಗಿ ಮನುಕುಲದ ಅವಿಭಾಜ್ಯ ಅಂಗವಾಗಿ ಬೆಳೆದುಬಂದಿವೆ. ರಂಗಭೂಮಿಯ ಪರಿಕಲ್ಪನೆ ವಿಶಾಲವಾಗಿದ್ದು ಇಂದು ನಾನಾ ರೂಪಾಂತರಗಳ ಮೂಲಕ ತನ್ನ ಜೀವಂತಿಕೆಯನ್ನು ಕಾಪಾಡಿಕೊಂಡಿದೆ ಎಂದರು.


ಹಿರಿಯ ಸಾಹಿತಿ ಅ.ಹ. ಪಾಟೀಲ ಅವರು ತಬಲ ಬಾರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಂಗಕರ್ಮಿ ಗಣೇಶ ಕೆಂಚನಾಲ ಪ್ರಾಸ್ತಾವಿಕ ಮಾತನಾಡಿ, ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದು ಪೋಷಕರು ತಮ್ಮ ಮಕ್ಕಳನ್ನು ಶಿಬಿರಕ್ಕೆ ಸೇರಿಸುವ ಮೂಲಕ ರಂಗಭೂಮಿಯ ಜೀವಂತಿಕೆಗೆ ಸಹಕರಿಸುವಂತೆ ಮನವಿ ಮಾಡಿದರು.


ಸಮಟಗಾರು ಕು|| ಸಂಗೀತಾ ಅವರು ರಂಗ ಗೀತೆಗಳನ್ನು ಪ್ರಸ್ತುತಪಡಿಸಿದರು. ಲಕ್ಷ್ಮೀ ಭದ್ರಾವತಿ ಅವರು ಕಲ್ಯಾಣ ಕ್ರಾಂತಿಯ ತುಣುಕನ್ನು ಏಕವ್ಯಕ್ತಿ ಪ್ರದರ್ಶನ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ, ಹರೀಶ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Malnad Times

Recent Posts

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

2 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

3 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

9 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

20 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

1 day ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago