Categories: Ripponpete

ರಾಮಕೃಷ್ಣ ವಿದ್ಯಾಲಯಕ್ಕೆ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ


ರಿಪ್ಪನ್‌ಪೇಟೆ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆಯ ರಾಮಕೃಷ್ಣ ವಿದ್ಯಾಲಯ ಶೇ.100 ರಷ್ಟು ರಿಸಲ್ಟ್ ಪಡೆದಿದೆ ಎಂದು ಸಂಸ್ಥೆಯ ಪ್ರಾಚಾರ್ಯ ರವಿಕುಮಾರ್ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಸತತವಾಗಿ 7ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷವು 32 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು ಆತ್ಯುನ್ನತ ಶ್ರೇಣಿಯಲ್ಲಿ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಾರಾಗಿರುವುದು ಸಂಸ್ಥೆಯ ಹೆಮ್ಮೆಯೆಂದರು.

ಇಂಪನ ಬಿ.ಟಿ.625ಕ್ಕೆ 611 (98%) ಕುಮಾರಿ ದಾತ್ರಿ 607 (97.12%) ಕುಮಾರಿ ಇಂಚರಾ ಬಿ.ಟಿ.599 ಅಂಕಗಳಿಸುವುದರೊಂದಿಗೆ ರಾಮಕೃಷ್ಣ ಶಾಲೆಗೆ 100% ಅಂಕ ಫಲಿತಾಂಶ ತರುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಶಿಕ್ಷಕ ವೃಂದ ಪೋಷಕ ವರ್ಗ ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಶ್ರೀಗುರುಬಸವೇಶ್ವರ ಪ್ರೌಢಶಾಲೆ 82% ಫಲಿತಾಂಶ

SSLC ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆಯ ಶ್ರೀಗುರುಬಸವೇಶ್ವರ ಪ್ರೌಢಶಾಲೆ ಶೇ. 82% ರಷ್ಟು ಫಲಿತಾಂಶ ಪಡೆದಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದರು.

32 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 26 ಡಿಸ್ಟಿಂಕ್ಷನ್ 3 ಪ್ರಥಮ ಸ್ಥಾನದಲ್ಲಿ 18 ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಉತ್ತೀರ್ಣಾರಾಗಿದ್ದು ರಕ್ಷಾ ಹೆಚ್ ಎಂಬ ವಿದ್ಯಾರ್ಥಿನಿ 599 ಅಂಕಗಳಿಸುವುದರೊಂದಿಗೆ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದು ಈ ಸಾಧನೆಗೆ ಅಧ್ಯಾಪಕ ವೃಂದ ಹಾಗೂ ಆಡಳಿತ ಮಂಡಳಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಚಿಕ್ಕಜೇನಿ ಪ್ರೌಢ ಶಾಲೆಗೆ ಶೇ.97 ಫಲಿತಾಂಶ

ಚಿಕ್ಕಜೇನಿಯ ಸರ್ಕಾರಿ ಪ್ರೌಢ ಶಾಲೆಗೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.97 ಫಲಿತಾಂಶ ದೊರೆತಿದೆ.
ಈ ಶಾಲೆಯ ಒಟ್ಟು 39 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 98 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 16 ಡಿಸ್ಟಿಂಕ್ಷನ್, 14 ಫಸ್ಟ್ ಕ್ಲಾಸ್, 7 ಸೆಕೆಂಡ್ ಕ್ಲಾಸ್ ಮತ್ತು ಒಂದು ಪಾಸ್ ಕ್ಲಾಸ್ ಫಲಿತಾಂಶ ಪಡೆದಿದ್ದಾರೆ. ಉತ್ತಮ ಫಲಿತಾಂಶದ ಬಗ್ಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ ಮತ್ತು ಸದಸ್ಯರು ಮತ್ತು ಶಾಲಾ ಮುಖ್ಯ ಶಿಕ್ಷಕ ಶಿವಾಜಿ ಟಿ.ಎಂ. ಅಭಿನಂದಿಸಿರುತ್ತಾರೆ.

ಮೇರಿಮಾತಾ ಪ್ರೌಢ ಶಾಲೆಗೆ ಶೇ.90 ಫಲಿತಾಂಶ:
ಇಲ್ಲಿನ ಮೇರಿಮಾರಾ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 90 ರಷ್ಟು ಫಲಿತಾಂಶ ಬಂದಿದೆ.

Malnad Times

Recent Posts

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

42 mins ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

3 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

5 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

8 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

12 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

1 day ago