ರಿಪ್ಪನ್ಪೇಟೆ: ಇಲ್ಲಿನ ದಿ.ಎಂ.ಕೆ.ರೇಣುಕಪ್ಪಗೌಡ ಪ್ರತಿಷ್ಟಾನ ಮಸರೂರು ಮತ್ತು ಮಲೆನಾಡು ಕಲಾ ತಂಡ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಾಲ್ಕನೇ ವರ್ಷದ “ಹಳ್ಳಿ ಮಕ್ಕಳ ರಂಗಹಬ್ಬ‘’ ಮಕ್ಕಳ ಬೇಸಿಗೆ ಶಿಬಿರವನ್ನು ಏಪ್ರಿಲ್ 8 ರಿಂದ 15 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಕಾಶವಾಣಿ ಕಲಾವಿದ ರಂಗ ಶಿಕ್ಷಕ ಡಾ.ಗಣೇಶ ಕೆಂಚನಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
6 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಈ ಶಿಬಿರವನ್ನು ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದು ಈ ಶಿಬಿರದಲ್ಲಿ ನಾಟಕ, ನೃತ್ಯ ಚಿತ್ರಕಲೆ, ಜಾನಪದ ಗೀತಗಾಯನ ವೇದಿಕೆ ನಿರ್ವಹನೆ ಸಾಹಿತ್ಯ ಪರಿಚಯ ರಂಗಗೀತೆ ಕರಕುಶಲ ಕಲೆ ಕಥೆ ಕವನ ಯೋಗ ಗ್ರಾಮೀಣ ಕಲೆ ಸಾಮಾಜಿಕ ಕಳಕಳಿ ಸೇರಿದಂತೆ ಇನ್ನೂ ವಿಸ್ಮಯಕಾರಿ ಕಲಿಕಾ ಶಿಬಿರವನ್ನು ಆಯೋಜಿಸಲಾಗಿದ್ದು ಮಕ್ಕಳ ಕಿರುಚಿತ್ರ ಪ್ರದರ್ಶನ ಮತ್ತು ತರಬೇತಿ ಜೊತೆಗೆ ಶಿಬಿರ ಕೊನೆಯ ದಿನ ಮಕ್ಕಳಿದ 2 ನಾಟಕ ಪ್ರದರ್ಶನ ಮಾಡಿಸಲಾಗುವುದು.
ಈ ಶಿಬಿರಕ್ಕೆ ರಂಗಭೂಮಿ ಕಿರುತೆರೆ ನೀನಾಸಂ ಪದವೀಧರರು, ಅನುಭವಿ ನಿರ್ದೇಶಕರುಗಳು ಆಗಮಿಸಿ ಸೂಕ್ತ ತರಬೇತಿ ನೀಡುವರು. ಕೇವಲ 40 ಜನರಿಗೆ ಅವಕಾಶವಿದ್ದು ಮೊದಲು ಬಂದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಶಿಬಿರದ ಶುಲ್ಕ 1100 ರೂ. ಆಗಿದ್ದು ಹೆಚ್ಚಿನ ಮಾಹಿತಿಗಾಗಿ ಮೊ.ನಂ 9902358019, 94807245592, 9886973045,
9449951748 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…