Categories: Ripponpete

ರಿಪ್ಪನ್‌ಪೇಟೆಯಲ್ಲಿ ನಟ ಶಿವರಾಜ್‌ಕುಮಾರ್ ಬೇಳೂರು ಪರ ಪ್ರಚಾರ ; ಮಾವ ಬಂಗಾರಪ್ಪಾಜಿ ಶಕ್ತಿ ತುಂಬಲು ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಲು ಮತದಾರರಲ್ಲಿ ಮನವಿ

ರಿಪ್ಪನ್‌ಪೇಟೆ: ನಮ್ಮ ನಮ್ಮ ವರ್ಣರಂಜಿತ ನಾಯಕ ಹುಟ್ಟು ಹೋರಾಟಗಾರ ರೈತ ಪರ ನಾಯಕ ದಿ.ಎಸ್.ಬಂಗಾರಪ್ಪಾಜಿಯವರ ಅಭಿಮಾನಿಗಳಿರುವ ಈ ಕ್ಷೇತ್ರದಲ್ಲಿ ಅವರೇ ಬೆಳೆಸಿದ ಗೋಪಾಲಕೃಷ್ಣ ಬೇಳೂರು ಇವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಜಯಗಳಿಸುವಂತೆ ಮತದಾರರಲ್ಲಿ ಮನವಿ ಮಾಡುತ್ತಿದ್ದಂತೆ ಅಭಿಮಾನಿಗಳು ಜಯಘೋಷ ಮುಗಿಲು ಮುಟ್ಟುವಂತಾಗಿತ್ತು. ಶಿವಣ್ಣ ಹಾಡು ಹೇಳಿ ಎಂದು ಹಲವರು ಕೂಗುತ್ತಿದ್ದಂತೆ ಜೋಗಿ ಚಿತ್ರದ ‘ಎಲ್ಲೋ ಜೋಗಪ್ಪ ನಿನ್ನ ಅರಮನೆ’ ಮತ್ತು ಪುನೀತ್ ರಾಜ್‍ಕುಮಾರ್ ರವರ ‘ಬಾನ ದಾರಿಯಲ್ಲಿ’ ಹಾಡನ್ನು ಹಾಡಿ ಮತದಾರರನ್ನು ಶಿವಣ್ಣ ಮನರಂಜಿಸಿದರು.

ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಮಾತನಾಡಿ, ಸೊರಬ ಸಾಗರ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಮತದಾರರು ನಮ್ಮ ತಂದೆಯವರ ಅಭಿಮಾನಿಗಳ ತವರೂರು ಆ ಕಾರಣದಿಂದಾಗಿ ಮತದಾರರು ಈ ಬಾರಿಯ ಚುನಾವಣೆಯಲ್ಲಿ ನಮ್ಮಗಳ ಕೈ ಬಿಡುವುದಿಲ್ಲ ಎಂಬ ನಂಬಿಕೆ ನಮಗಿದೆ. ಈ ಬಾರಿ ಗೆಲುವು ನಮ್ಮದೇ ಎಂಬುದಕ್ಕೆ ಇಲ್ಲಿ ಸೇರಿರುವ ಅಪಾರ ಜನಸ್ತೋಮವೇ ಸಾಕ್ಷಿಯಾಗಿದೆ ಎನ್ನುವುದರೊಂದಿಗೆ ಪರೋಕ್ಷವಾಗಿ ಬಿಜೆಪಿಗೆ ಈ ಜನಸ್ತೋಮವನ್ನು ಕಂಡು ಭಯಹುಟ್ಟುವಂತೆ ಮಾಡಿದೆ ಎಂದರು.

ಗವಟೂರು ಬಸ್ ನಿಲ್ದಾಣದಿಂದ ಸಾವಿರಾರು ಸಂಖ್ಯೆಯಲ್ಲಿ ಬೈಕ್ ರ‍್ಯಾಲಿಯ ಮೆರವಣಿಗೆ ಆರಂಭಗೊಂಡು ವಿನಾಯಕ ವೃತ್ತದ ಮೂಲಕ ಸಾಗರ ರಸ್ತೆಯ ಮೆಸ್ಕಾಂ ಕಛೇರಿಯ ಬಳಿ ಕೊನೆಗೊಂಡಿತು.

ಈ ಸಂದರ್ಭದಲ್ಲಿ ಗೀತಾ ಶಿವರಾಜ್ ಕುಮಾರ್, ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು, ಜಿ.ಪಂ.ಮಾಜಿ ಸದಸ್ಯರಾದ ಕಲಗೋಡು ರತ್ನಾಕರ್, ಬಂಡಿ ರಾಮಚಂದ್ರ, ಶ್ವೇತಾ, ಬಿ.ಜಿ ನಾಗರಾಜ್, ಜಯಶೀಲಪ್ಪಗೌಡ, ಹಕ್ರೆ ಮಲ್ಲಿಕಾರ್ಜುನ, ಅಮ್ಮಿರ್‌ಹಂಜಾ, ಹೆಚ್.ವಿ.ಈಶ್ವರಪ್ಪಗೌಡ, ಎಂ.ಎಂ ಪರಮೇಶ್, ಎರಗಿ ಉಮೇಶ್, ಉಬೇದುಲ್ಲಷರೀಪ್, ಆಸೀಪ್‌ಭಾಷಾಸಾಬ್, ಜಿ.ಆರ್.ಗೋಪಾಲಕೃಷ್ಣ, ಮಳವಳ್ಳಿ ಮಂಜುನಾಥ, ಸಣ್ಣಕ್ಕಿ ಮಂಜ ಇನ್ನಿತರರು ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Malnad Times

Recent Posts

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

53 mins ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

1 hour ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

6 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

8 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

21 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

23 hours ago