ರಿಪ್ಪನ್ಪೇಟೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವ
ರಿಪ್ಪನ್ಪೇಟೆ: ಇಲ್ಲಿನ ಸಾಗರ ರಸ್ತೆಯಲ್ಲಿರುವ ವಿಶ್ವಮಾನವ ಸಭಾಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ರಿಪ್ಪನ್ಪೇಟೆ ಇವರು ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದರು.
ತಾಲ್ಲೂಕು ಒಕ್ಕಲಿಗರ ಸಂಘದ ಆಧ್ಯಕ್ಷ ಎಂ.ಬಿ.ಲಕ್ಷ್ಮಣಗೌಡ ಜಯಂತ್ಯೋತ್ಸ ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಂಗಳೂರು ರಾಜಧಾನಿಯ ನಿರ್ಮಾತೃವಾದ ಕೆಂಪೇಗೌಡರು ಮುಂದಾಲೋಚನೆ ಇಂದು ಬೃಹದಾಕಾರವಾಗಿ ಬೆಳೆಯುವ ಮೂಲಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಿರಿಯನ್ನು ಉತ್ತುಂಗಕ್ಕೆ ಏರಿಸುವ ಕನಸಿನೊಂದಿಗೆ ಬೆಂಗಳೂರನ್ನು ಕಟ್ಟಿ ಅತ್ಯಂತ ಮಾದರಿ ಅಡಳಿತ ನೀಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರದು ಎಂದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಒಕ್ಕಲಿಗೆ ಸಂಘದ ಪದಾಧಿಕಾರಿಗಳು ಮತ್ತು ಮಹಿಳಾ ಸಮಾಜದ ಅಧ್ಯಕ್ಷರು ಮತ್ತು ಪದಾಧಿಕಾರಿ ವರ್ಗ ಹಾಜರಿದ್ದರು.