Categories: Ripponpete

ರಿಪ್ಪನ್‌ಪೇಟೆಯಲ್ಲಿ ನಾಳೆ ‘ಪ್ರಜಾವಾಣಿ’ ಅಮೃತ ಮಹೋತ್ಸವ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪಟ್ಟಣದ ಪ್ರಜಾವಾಣಿ ಬಳಗದ ಓದುಗರ ವೇದಿಕೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಜಾವಾಣಿಯ ಅಮೃತ ಮಹೋತ್ಸವ ಕಾರ್ಯಕ್ರಮ ಫೆಬ್ರವರಿ 23 ಗುರುವಾರ ಬೆಳಗ್ಗೆ 11ಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜರುಗಲಿದೆ.

ಡಾ. ಬಿ ಸಿ ರಾಯ್ ಪ್ರಶಸ್ತಿ ಪುರಸ್ಕೃತ ಶಿವಮೊಗ್ಗದ ಡಾ. ಕೃಷ್ಣ ಎಸ್. ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಗುರಿ ತಲುಪುವುದು ಹೇಗೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ರಾಜು ಆರ್.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪ್ರಜಾವಾಣಿ ದಿನಪತ್ರಿಕೆಯ ದಾವಣಗೆರೆ ಬ್ಯೂರೋ ಮುಖ್ಯಸ್ಥರಾದ ಸಿದ್ದಯ್ಯ ಹಿರೇಮಠ, ಪ್ರಜಾವಾಣಿ ಜಿಲ್ಲಾ ವರದಿಗಾರ ಜಿ.ಎಚ್. ವೆಂಕಟೇಶ್, ಪ್ರಜಾವಾಣಿ ಪ್ರಸರಣಾಂಗ ವಿಭಾಗದ ಮುಖ್ಯಸ್ಥ ಪ್ರಕಾಶ್ ನಾಯಕ್ ದಾವಣಗೆರೆ ಭಾಗವಹಿಸಲಿದ್ದಾರೆ.
ಡಾ. ರತ್ನಾಕರ್ ಸಿ. ಕುನಗೋಡು ಮುಖ್ಯಸ್ಥರು ಕನ್ನಡ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆ, ಶಿವಮೊಗ್ಗ ಜಿಲ್ಲಾ ಪ್ರಜಾವಾಣಿ ಜಾಹೀರಾತು ವಿಭಾಗದ ಪ್ರತಿನಿಧಿ ಚೇತನ್ ಕುಮಾರ್ ಜಿ. ಉಪಸ್ಥಿತರಿರುವರು.


ಇದೇ ಸಂದರ್ಭದಲ್ಲಿ ಬಿ.ಟಿ. ರವೀಂದ್ರ ಕೃಷಿಕರು, ಹುಲಿಗಿನ ಮನೆ, ಚಂದ್ರಶೇಖರ್ (ಮಂಜಣ್ಣ) ಸಮಾಜಮುಖಿ ಚಿಂತಕರು ರಿಪ್ಪನ್‌ಪೇಟೆ, ದುಗ್ಗಪ್ಪ ಜಿ. ಶಿಕ್ಷಣ ಸಂಯೋಜಕರು ಹೊಸನಗರ, ಎಂ.ಲೋಕೇಶ್ ಪ್ರಜಾವಾಣಿ ಪತ್ರಿಕೆ ವಿತರಕರು ರಿಪ್ಪನ್‌ಪೇಟೆ ಇವರನ್ನು ಸನ್ಮಾನಿಸಲಾಗುವುದು ಎಂದು ಪ್ರಜಾವಾಣಿ ಬಳಗದ ಓದುಗರ ವೇದಿಕೆ ರಿ.ರಾ. ರವಿಶಂಕರ್ ತಿಳಿಸಿದ್ದಾರೆ.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

19 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

20 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

20 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

22 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

1 day ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

1 day ago